Home / ಲೇಖನ / ಇತರೆ / ಸಾವು

ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...