ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೧೮
Next post ಚಂದ್ರ ಆಗೋದು ಸಾಧ್ಯವಿಲ್ಲ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys