Home / ಲೇಖನ / ಇತರೆ / ಸಾವು

ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...