Home / ಕವನ / ಕವಿತೆ / ನವಿರಂಗಿ

ನವಿರಂಗಿ

ಒಂದೂರಿನಲ್ಲಿ ಒಬ್ಬರಸಿದ್ದ
ಅವನುಡುಪೆಂದರೆ ಬಹು ಪ್ರಸಿದ್ದ.
ಒಮ್ಮೆಗೆ ಓಲಗದೊಳು ಕುಳಿತಿರಲು
ಬಂದೆರೆಡೆಗೆ ಇಬ್ಬರು ದರ್ಜಿಗಳು,
“ಕಂಡೂ ಕಾಣದ ತೆರ ನವಿರಾಗಿಹ
ಗಾಳಿಗು ಆಕಾಶಕು ತೆಳುವಾಗಿಹ
ಸೋಜಿಗದುಡುಪನು ಹೊಲಿಯುವೆ”ವೆಂದು
ಆಣೆಯನಿಟ್ಟರು ಎಲ್ಲರ ಮುಂದು.
ಅರಸಗೆ ಉಡುಪೆಂದರೆ ಬಲು ಆಸೆ.
ನಂಬಿಸಿತವನನು ಠಕ್ಕರ ಭಾಷೆ.
ಒಂದು ವರುಷ ಗಡುಬನು ಕೇಳಿದರು
ರಾಶಿಹೊನ್ನ ಮುಂಗಡ ಕೇಳಿದರು.
ಉಡುಪಿನಾಸೆಗರಸಸ್ತು ಎಂದ
ಅವರೆರೆತಕೆಲ್ಲಕ್ಕೂ “ಹ್ಞೂ” ಎಂದ.

ಇಂತು ಬೊಕ್ಕಸವ ಬರಿದನು ಮಾಡಿ
ನೆಯ್ಯುವ ಹೊಲಿಯುವ ಆಟವ ಹೂಡಿ
ಜಾಣರಿಗೇ ಇದು ಕಾಣುವುದೆಂದು
ಸಾಮಾನ್ಯರಿಗೆಂದಿಗು ಅಲ್ಲೊಂದು
ಬಂದವರಿಗೆಲ್ಲ ಬಯಲನೆ ತೋರಿ
ಇಲ್ಲದುಡುಪಿನಂದವನೇ ಸಾರಿ
ಎಲ್ಲರ ನಂಬಿಸಿದರು ದರ್ಜಿಗಳು.
ಇದರ ಮಾತನಡುಗೂಲಜ್ಜಿಗಳು
ಹರಡಿದರೆಲ್ಲೆಡೆ ಜಾತ್ರೆ ನೆರೆಯಿತು.
ದೊರೆ ಉಡುಪನುಡುವ ದಿನವೇರ್ಪಟ್ಟಿತು.
ಉಟ್ಟನರಸನೀ ಬಯಲುಬಟ್ಟೆಯ,
ಬೆತ್ತಲೆಯೊಳೆ ಕೊಂಡನು ಜನದಿಟ್ಟಿಯ!
“ಅಯ್ಯೋ! ಬರಿಮೈ” ಎಂದರು ಜನಮನದೊಳಗೆ,
“ಆಹಾ ವಸ್ತ್ರದ ನವಿರೆಂಥದು!” ಎಂದರು ಹೊರಗೆ.
ಆದೊಡೆ ಮಗುವೊಂದು
“ಅಯ್ಯೋ ಬೆತ್ತಲೆಬಸವನ ನೋಡೆ”ಂದು
ಚಪ್ಪಳೆಯಿಕ್ಕಿತು; ಎಂಥ ದಿಟ್ಟತನ!
“ಹೌದೇ, ಬರಿಬೆತ್ತಲೆ!” ಎಂದರು ಊರ ಜನ
“ದಿಟ, ದಿಟ” ಪಿಸುಗುಟ್ಟಿತು ಪರಿವಾರ ;
ಅಳುಕಿ ಅಳುಕಿ “ಹೌದೆ”ಂದಿತು ಸರಕಾರ.
ಆಗರಸನು ಬೆಚ್ಚಿ
“ಕೆಚ್ಚಿನಿವರ ನೆಚ್ಚಿ”
ಎನ್ನುತ ಅವಮಾನಕೆ ಕಣ್ಮುಚ್ಚಿ
ಓಡಿದನರಮನೆಗೆ,
ತಿಂಗಳವರೆಗೂ ಬಾರದೆ ಹೊರಗೆ
ನೀವೇನೆನ್ನುವಿರೀ ಕತೆಗೆ?

ಈ ಕವನ ಹಾನ್ ಅನ್‌ಡೆರ್‌ಸೆನ್‌ ಅವರ ಕತಯೊಂದರ ಭಾವಾನುವಾದ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...