Home / ಕವನ / ಕವಿತೆ / ನವಿರಂಗಿ

ನವಿರಂಗಿ

ಒಂದೂರಿನಲ್ಲಿ ಒಬ್ಬರಸಿದ್ದ
ಅವನುಡುಪೆಂದರೆ ಬಹು ಪ್ರಸಿದ್ದ.
ಒಮ್ಮೆಗೆ ಓಲಗದೊಳು ಕುಳಿತಿರಲು
ಬಂದೆರೆಡೆಗೆ ಇಬ್ಬರು ದರ್ಜಿಗಳು,
“ಕಂಡೂ ಕಾಣದ ತೆರ ನವಿರಾಗಿಹ
ಗಾಳಿಗು ಆಕಾಶಕು ತೆಳುವಾಗಿಹ
ಸೋಜಿಗದುಡುಪನು ಹೊಲಿಯುವೆ”ವೆಂದು
ಆಣೆಯನಿಟ್ಟರು ಎಲ್ಲರ ಮುಂದು.
ಅರಸಗೆ ಉಡುಪೆಂದರೆ ಬಲು ಆಸೆ.
ನಂಬಿಸಿತವನನು ಠಕ್ಕರ ಭಾಷೆ.
ಒಂದು ವರುಷ ಗಡುಬನು ಕೇಳಿದರು
ರಾಶಿಹೊನ್ನ ಮುಂಗಡ ಕೇಳಿದರು.
ಉಡುಪಿನಾಸೆಗರಸಸ್ತು ಎಂದ
ಅವರೆರೆತಕೆಲ್ಲಕ್ಕೂ “ಹ್ಞೂ” ಎಂದ.

ಇಂತು ಬೊಕ್ಕಸವ ಬರಿದನು ಮಾಡಿ
ನೆಯ್ಯುವ ಹೊಲಿಯುವ ಆಟವ ಹೂಡಿ
ಜಾಣರಿಗೇ ಇದು ಕಾಣುವುದೆಂದು
ಸಾಮಾನ್ಯರಿಗೆಂದಿಗು ಅಲ್ಲೊಂದು
ಬಂದವರಿಗೆಲ್ಲ ಬಯಲನೆ ತೋರಿ
ಇಲ್ಲದುಡುಪಿನಂದವನೇ ಸಾರಿ
ಎಲ್ಲರ ನಂಬಿಸಿದರು ದರ್ಜಿಗಳು.
ಇದರ ಮಾತನಡುಗೂಲಜ್ಜಿಗಳು
ಹರಡಿದರೆಲ್ಲೆಡೆ ಜಾತ್ರೆ ನೆರೆಯಿತು.
ದೊರೆ ಉಡುಪನುಡುವ ದಿನವೇರ್ಪಟ್ಟಿತು.
ಉಟ್ಟನರಸನೀ ಬಯಲುಬಟ್ಟೆಯ,
ಬೆತ್ತಲೆಯೊಳೆ ಕೊಂಡನು ಜನದಿಟ್ಟಿಯ!
“ಅಯ್ಯೋ! ಬರಿಮೈ” ಎಂದರು ಜನಮನದೊಳಗೆ,
“ಆಹಾ ವಸ್ತ್ರದ ನವಿರೆಂಥದು!” ಎಂದರು ಹೊರಗೆ.
ಆದೊಡೆ ಮಗುವೊಂದು
“ಅಯ್ಯೋ ಬೆತ್ತಲೆಬಸವನ ನೋಡೆ”ಂದು
ಚಪ್ಪಳೆಯಿಕ್ಕಿತು; ಎಂಥ ದಿಟ್ಟತನ!
“ಹೌದೇ, ಬರಿಬೆತ್ತಲೆ!” ಎಂದರು ಊರ ಜನ
“ದಿಟ, ದಿಟ” ಪಿಸುಗುಟ್ಟಿತು ಪರಿವಾರ ;
ಅಳುಕಿ ಅಳುಕಿ “ಹೌದೆ”ಂದಿತು ಸರಕಾರ.
ಆಗರಸನು ಬೆಚ್ಚಿ
“ಕೆಚ್ಚಿನಿವರ ನೆಚ್ಚಿ”
ಎನ್ನುತ ಅವಮಾನಕೆ ಕಣ್ಮುಚ್ಚಿ
ಓಡಿದನರಮನೆಗೆ,
ತಿಂಗಳವರೆಗೂ ಬಾರದೆ ಹೊರಗೆ
ನೀವೇನೆನ್ನುವಿರೀ ಕತೆಗೆ?

ಈ ಕವನ ಹಾನ್ ಅನ್‌ಡೆರ್‌ಸೆನ್‌ ಅವರ ಕತಯೊಂದರ ಭಾವಾನುವಾದ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್