Home / ಕವನ / ಕವಿತೆ / ನವಿರಂಗಿ

ನವಿರಂಗಿ

ಒಂದೂರಿನಲ್ಲಿ ಒಬ್ಬರಸಿದ್ದ
ಅವನುಡುಪೆಂದರೆ ಬಹು ಪ್ರಸಿದ್ದ.
ಒಮ್ಮೆಗೆ ಓಲಗದೊಳು ಕುಳಿತಿರಲು
ಬಂದೆರೆಡೆಗೆ ಇಬ್ಬರು ದರ್ಜಿಗಳು,
“ಕಂಡೂ ಕಾಣದ ತೆರ ನವಿರಾಗಿಹ
ಗಾಳಿಗು ಆಕಾಶಕು ತೆಳುವಾಗಿಹ
ಸೋಜಿಗದುಡುಪನು ಹೊಲಿಯುವೆ”ವೆಂದು
ಆಣೆಯನಿಟ್ಟರು ಎಲ್ಲರ ಮುಂದು.
ಅರಸಗೆ ಉಡುಪೆಂದರೆ ಬಲು ಆಸೆ.
ನಂಬಿಸಿತವನನು ಠಕ್ಕರ ಭಾಷೆ.
ಒಂದು ವರುಷ ಗಡುಬನು ಕೇಳಿದರು
ರಾಶಿಹೊನ್ನ ಮುಂಗಡ ಕೇಳಿದರು.
ಉಡುಪಿನಾಸೆಗರಸಸ್ತು ಎಂದ
ಅವರೆರೆತಕೆಲ್ಲಕ್ಕೂ “ಹ್ಞೂ” ಎಂದ.

ಇಂತು ಬೊಕ್ಕಸವ ಬರಿದನು ಮಾಡಿ
ನೆಯ್ಯುವ ಹೊಲಿಯುವ ಆಟವ ಹೂಡಿ
ಜಾಣರಿಗೇ ಇದು ಕಾಣುವುದೆಂದು
ಸಾಮಾನ್ಯರಿಗೆಂದಿಗು ಅಲ್ಲೊಂದು
ಬಂದವರಿಗೆಲ್ಲ ಬಯಲನೆ ತೋರಿ
ಇಲ್ಲದುಡುಪಿನಂದವನೇ ಸಾರಿ
ಎಲ್ಲರ ನಂಬಿಸಿದರು ದರ್ಜಿಗಳು.
ಇದರ ಮಾತನಡುಗೂಲಜ್ಜಿಗಳು
ಹರಡಿದರೆಲ್ಲೆಡೆ ಜಾತ್ರೆ ನೆರೆಯಿತು.
ದೊರೆ ಉಡುಪನುಡುವ ದಿನವೇರ್ಪಟ್ಟಿತು.
ಉಟ್ಟನರಸನೀ ಬಯಲುಬಟ್ಟೆಯ,
ಬೆತ್ತಲೆಯೊಳೆ ಕೊಂಡನು ಜನದಿಟ್ಟಿಯ!
“ಅಯ್ಯೋ! ಬರಿಮೈ” ಎಂದರು ಜನಮನದೊಳಗೆ,
“ಆಹಾ ವಸ್ತ್ರದ ನವಿರೆಂಥದು!” ಎಂದರು ಹೊರಗೆ.
ಆದೊಡೆ ಮಗುವೊಂದು
“ಅಯ್ಯೋ ಬೆತ್ತಲೆಬಸವನ ನೋಡೆ”ಂದು
ಚಪ್ಪಳೆಯಿಕ್ಕಿತು; ಎಂಥ ದಿಟ್ಟತನ!
“ಹೌದೇ, ಬರಿಬೆತ್ತಲೆ!” ಎಂದರು ಊರ ಜನ
“ದಿಟ, ದಿಟ” ಪಿಸುಗುಟ್ಟಿತು ಪರಿವಾರ ;
ಅಳುಕಿ ಅಳುಕಿ “ಹೌದೆ”ಂದಿತು ಸರಕಾರ.
ಆಗರಸನು ಬೆಚ್ಚಿ
“ಕೆಚ್ಚಿನಿವರ ನೆಚ್ಚಿ”
ಎನ್ನುತ ಅವಮಾನಕೆ ಕಣ್ಮುಚ್ಚಿ
ಓಡಿದನರಮನೆಗೆ,
ತಿಂಗಳವರೆಗೂ ಬಾರದೆ ಹೊರಗೆ
ನೀವೇನೆನ್ನುವಿರೀ ಕತೆಗೆ?

ಈ ಕವನ ಹಾನ್ ಅನ್‌ಡೆರ್‌ಸೆನ್‌ ಅವರ ಕತಯೊಂದರ ಭಾವಾನುವಾದ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...