ಕವಿಶಿಷ್ಯ

ಕವಿಗಳಿಗೆ ಗುರುವು ತಾನೆಂಬ ಗರುವಿಕೆಯ ಮರು-
ಭೂಮಿಯ ಮರೀಚಿಕಾಜಲಪಾನಲೋಲನಾ-
ಗುವನು ಅರೆಗಳಿಗೆ, ಬಿಡಿಕರಡುಗವಿತೆಯ ಮೊದಲ
ಒಂದೆರಡು ಸಾಲುಗಳ ಲೀಲೆಯಲಿ ಬರೆದ ಬಡ-
ಗಬ್ಬಿಗನು ಕೂಡ; ಸ್ವಕಪೋಲಕಲ್ಪಿತದ ಕೀ-
ರ್‍ತಿಯ ಪ್ರತಿಧ್ವನಿಯು ತುಂಬುವದು ಕಿವಿಗವಿಯನ್ನು,
ತನ್ನ ಕೈ ಹಿಡಿವರಾರಿನ್ನು ಇಳೆಯೊಳಗೆನುತ
ಸರಸತಿಯೆ ಕೈಪಿಡಿದ ಕನಸ ಕಾಣುವನಹಹ!

ಸುಕವಿ ಜನಮಿತ್ರ; ನವ ಕವನಕ್ಕೆ ರನ್ನಗ-
ನ್ನಡಿ; ರಸಿಕ; ಸರಸಿಗಳ ಮಧ್ಯದಲಿ ಸರಸಿ; ಮು-
ಪ್ಪಿನಲಿ ಹರೆಯದ ಹಸಿರ, ಹಸುಳೆತನದಾಚಿಗುರ
ಕುಣಿಕುಣಿಸಿ ಕುಣಿದು ಕುಣಿಸಿದ ಮೂರ್‍ತಿವೆತ್ತ ತೆಂ-
ಗಾಳಿ; ನೀ ಬಂದೆ-ಹಾ, ಪೋದೆ ! ಸಾರಿದೆ ಜಗಕೆ :
ಕವಿಶಿಷ್ಯನೆಂಬುವಾ ಕೀರ್‍ತಿ ಕವಿಗೂ ಮೇಲು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೋಪಾಳಭಟ್ಟರ ಹುಲಿ
Next post ಮುನಿಯನ್ ಬೋಣಿ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…