Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...