Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...