Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...