ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಳ್ಳು
Next post ನಗೆ ಡಂಗುರ – ೧೧೯

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys