Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...