ಗಂಧವತಿ

ಗಂಧವತಿ ಪೃಥ್ವಿಯ ಸುಗಂಧ-ಕಂದದ ಬಳ್ಳಿ
ಹಬ್ಬುತಿದೆ ಬೆಟ್ಟ ಸಾಲುಗಳಲ್ಲಿ; ಗಿರಿಶಿಖರ
ಮುಕುಲದೊಲು ಮೊಗವನೆತ್ತಿವೆ ನಭದಲಲ್ಲಲ್ಲಿ;
ಮಲರುವದದೆಂದೋ? ಕೊನೆಯ ಪ್ರಳಯ ಪ್ರಖರ
ದ್ವಾದಶಾದಿತ್ಯರದಿಸಿದ ಮೇಲೆ, ಚಳಿ ತಳ್ಳಿ
ನವವಸಂತವು ಬರಲು, ಸುರ-ತಾರಕಾನಿಕರ
ಭೃಂಗದಂತೆರಗಿ, ನರುಗಂಪನ್ನು ಹೊರಚೆಲ್ಲಿ,
ಮಗಮಗಿಸೆ ದೆಸೆ, ಆಗ ಮುಗಿಲ ಮೌನವೆ ಮುಖರ.

ಈ ಚಿತ್ತ ಸರಸಿಯಲಿ ಮಧುಕಲ್ಪನಾಕುಸುಮ
ತುರುಗಿ ತುಂಬಿವೆ, ಒಡಲಕಾವಣದೊಳೀ ಪ್ರಾಣ
ಕಾದಲನಿಗಾಗಿ ಕುಳಿತಿದೆ ಕಾದು, ಗಂಭೀರ!
ಬಾರ, ತಳುವದೆ ಜಗಜ್ಜೀವನವೆ! ಅತಿವಿಷಮ
ಸಂಕಟದೊಳಿದೆ; ತಡೆಯುವರೆ, ತಾನು ನಿತ್ರಾಣ;
ಉಸಿರೊಳುಳಿದಿದೆ. ಮಲಯಪವನ ವಿಲಯಸಮೀರ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಚ್ಚರಿಕೆ
Next post ಈ ಮೋಸ ದೋಸವಲ್ಲ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…