ಗಂಧವತಿ

ಗಂಧವತಿ ಪೃಥ್ವಿಯ ಸುಗಂಧ-ಕಂದದ ಬಳ್ಳಿ
ಹಬ್ಬುತಿದೆ ಬೆಟ್ಟ ಸಾಲುಗಳಲ್ಲಿ; ಗಿರಿಶಿಖರ
ಮುಕುಲದೊಲು ಮೊಗವನೆತ್ತಿವೆ ನಭದಲಲ್ಲಲ್ಲಿ;
ಮಲರುವದದೆಂದೋ? ಕೊನೆಯ ಪ್ರಳಯ ಪ್ರಖರ
ದ್ವಾದಶಾದಿತ್ಯರದಿಸಿದ ಮೇಲೆ, ಚಳಿ ತಳ್ಳಿ
ನವವಸಂತವು ಬರಲು, ಸುರ-ತಾರಕಾನಿಕರ
ಭೃಂಗದಂತೆರಗಿ, ನರುಗಂಪನ್ನು ಹೊರಚೆಲ್ಲಿ,
ಮಗಮಗಿಸೆ ದೆಸೆ, ಆಗ ಮುಗಿಲ ಮೌನವೆ ಮುಖರ.

ಈ ಚಿತ್ತ ಸರಸಿಯಲಿ ಮಧುಕಲ್ಪನಾಕುಸುಮ
ತುರುಗಿ ತುಂಬಿವೆ, ಒಡಲಕಾವಣದೊಳೀ ಪ್ರಾಣ
ಕಾದಲನಿಗಾಗಿ ಕುಳಿತಿದೆ ಕಾದು, ಗಂಭೀರ!
ಬಾರ, ತಳುವದೆ ಜಗಜ್ಜೀವನವೆ! ಅತಿವಿಷಮ
ಸಂಕಟದೊಳಿದೆ; ತಡೆಯುವರೆ, ತಾನು ನಿತ್ರಾಣ;
ಉಸಿರೊಳುಳಿದಿದೆ. ಮಲಯಪವನ ವಿಲಯಸಮೀರ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಚ್ಚರಿಕೆ
Next post ಈ ಮೋಸ ದೋಸವಲ್ಲ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

cheap jordans|wholesale air max|wholesale jordans|wholesale jewelry|wholesale jerseys