ದುರ್‍ಲಭಯುಕ್ತಿ

“ತಿಣಕದಿರು ಸುಖದ ಸಂಪಾದನೆಗೆ -ಒಂದಿನಿಸು
ನಗೆ, ಇನಿಸು ದುಃಖ ವಿಸ್ಮೃತಿ, ಇನಿಸು ಲೋಕಾನು-
ಭವವು, ರಸಿಕತೆ ಇನಿಸು, ತಾಳ್ಮೆಯಿರೆ ಇನಿಸಾನು;
ಹಲಸು ಕಾತಂತೆ ರಸಭಾವ ರೋಮಾಂಚಿತಸು.
ಹಸು ಕರುವಿನೆಡೆಗೆ ಕೆಚ್ಚಲುದೊರೆದು ಬರುವಂತೆ,
ಅಂಬೆಗರೆಯಲು ಕರುಳು, ಆನಂದ ತೊರೆಯುವದು,
ಹರಿಯುವದು, ಮೇರೆವರೆಯುವದು, ಹೃದಯದೊಳು ವಿಧು
ಬಿಂಬ ತುಂಬುವದು. ಬರಿದೇಕೆ ಭ್ರಾಂತಿಯ ಚಿಂತೆ?”

ಸುಖ ಸುಲಭ, ಅದರ ಹದ ದುರ್‍ಲಭವು ಎನುವ ರೀ-
ತಿಯು ರಮ್ಯ! ನಗೆ ಪಾರಿಜಾತ ಸುಕುಮಾರ ಸುಮ,
ಕಲ್ಲೊಳಕ್ಕರ ದುಃಖ; ಲೋಕಾನುಭವ ದರೀ-
ಕುಹರಗರ್‍ಜನೆ; ರಸಿಕಲಹರಿಯದು ಡಂಭ ಸಮ
ಸರಣಿ; ತಾಳ್ಮೆಯು ಕಪ್ಪೆ ತೂಕ; ಯೋಗವು ಹರೀ-
ಚ್ಛೆಯು; ಸುಖವು ಭ್ರಮವು; ಈ ಮನದ ಪಾಕವೆ ವಿಷಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್ಣಾಟಕದ ಕುಶಲತೆಯ ಪೂರ್ವಚರಿತ್ರೆ
Next post ನಡತೆ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…