ರಸಿಕ:-ವೇದಾಂತಿಗೆ

ನಗೆಯಾಡದಿರು ನನ್ನ ನಲುಮೆ ಒಲುಮೆಯ ಕುರಿತು.
ಅರಿಯೆನೇ ತುಂಬು ಮೈ ಮಾಂಸಪಿಂಡದ ಡಂಭ-
ವೆಂಬುದನು? ನಾಣು ನೆತ್ತರದಾಟ, ಮಧು ಚುಂಬ-
ನವು ಕುನ್ನಿ ಚಿನ್ನಾಟ, ಸಂತತಿಯ ತಂತು ಋತು-
ಮಾನಗಳ ಮಾಟ; ಅಂತಃಕರಣ ಹುಲು ಡೊಂಬ-
ನೊಲು ಕುಣಿದು ಮಣಿವಾಟ. ಅತಿಥಿ ರೂಢಿಗೆ ಹೊರತು
ಎನುವ ಮರಣವ ನಾನು ಎಂತು ಬಿಡುವೆನು ಮರೆತು?
ವಸ್ತುವು ಸ್ವಯಂಜ್ಯೋತಿ, ಘನ ಘನ ನಿರಾಲಂಬ!

ನಗೆಯಾಡು; ಬೀಭತ್ಸ ಹಾಸ್ಯದಲ್ಲಿ, ವಿರಕ್ತಿ
ರೌದ್ರವನ್ನುಳಿದು, ಅಭಯವ ಪಡೆದು, ಭಿನ್ನರುಚಿ
ರಂಜಿಸಲಿ, ತಮವ ಹಿಂಜಿಸಲಿ, ತರಿಯಲಿ ನಸುಕು.
ನನ್ನ ಒಲುಮೆಗೆ ಇದುವೆ ಫಲವೆಂಬೆ. ನಿತ್ಯ ರುಚಿ.
ಯಾನಂದ ತನುವು; ರಸರಸವು ಮೋಹದ ಮುಸುಕು.
ಸತ್ಯಮಿಥ್ಯವನರಸೆ, ಸಾಕು ಪ್ರೇಮದ ಯುಕ್ತಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಂದ್ರವಳ್ಳಿಯ ಭೂಶೋಧನೆ
Next post ಏನ್ ಏಳ್ಙೌ ಈ ವುಚ್ಗೆ!

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…