ಪತನಗೊಂಡ ಘನತೆಗೆ

ಹಿಂದೊಮ್ಮೆ ಅವಳ ಮುಖ ನೋಡಲೆಂದೇ ಜನ
ನೆರೆಯುತ್ತಿದ್ದರು ಭಾರಿ ಗುಂಪಿನಲ್ಲಿ,
ಮಂಜಾಗುತ್ತಿದ್ದುವು ಮುದುಕರೆಲ್ಲರ ದೃಷ್ಟಿ ಅವಳನ್ನಟ್ಟಿ;
ಜಿಪ್ಸಿಗಳ ಬೀಡಿನಲ್ಲಿ ಕಟ್ಟಕಡೆ ಸಭಿಕ
ಸ್ತುತಿಸುವಂತೆ ಪತನಗೊಂಡ ವೈಭವವನ್ನ
ಬರೆಯುವುದಿದೊಂದೆ ಕೈ ಗತಿಸಿದ್ದನ್ನ.

ಮುಖಮಾಟ, ನಗು ಮಧುರವಾಗಿಸಿದ ಹೃದಯ
ಉಳಿಯುವುವು ಇವು, ಕಳೆದದ್ದನ್ನು ಕಡೆಯುವ ನಾನು.
ಮತ್ತೆ ನೆರೆಯುವುದು ಜನ ಹಳೆ ಜಾಗದಲ್ಲೆ,
ತಿಳಿಯದು ಅದಕ್ಕೆ ಅದೆ ರಸ್ತೆಯಲ್ಲೆ
ಹಿಂದೆಂದೂ ಒಂದು ದಿನ ನಡೆದಾಡಿತ್ತು ಎಂದು
ಉರಿಮುಗಿಲಿನಂತಿದ್ದ ವಸ್ತುವೊಂದು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಮಾಡ್‌ಗಾನಳ ವೈವಾಹಿಕ ಜೀವನ ಸಂತೃಪ್ತಿಕರವಾಗಿರಲಿಲ್ಲ. ಅವಳು ತನ್ನ ಗಂಡನಿಂದ ಬೇರೆಯಾಗಿ ವಾಸಿಸತೊಡಗಿದಳು. ಹಿಂದೆ ಅವಳನ್ನು ಗೌರವದಿಂದ ನಡೆಸಿಕೊಂಡ ಐರಿಷ್ ರಾಷ್ಟ್ರೀಯ ಚಳುವಳಿಯ ಜನ ಈಗ ಅವಳ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಂಡರು. ಅಂಥ ಸಂದರ್‍ಭಗಳು ಮನಸ್ಸಿನಲ್ಲಿ ಇರುತ್ತ ಏಟ್ಸ್ ಬರೆದ ಕವನ ಇದು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂವಿನ ಸಂಕಲ್ಪ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೧

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys