Home / ಕವನ / ಅನುವಾದ / ಪತನಗೊಂಡ ಘನತೆಗೆ

ಪತನಗೊಂಡ ಘನತೆಗೆ

ಹಿಂದೊಮ್ಮೆ ಅವಳ ಮುಖ ನೋಡಲೆಂದೇ ಜನ
ನೆರೆಯುತ್ತಿದ್ದರು ಭಾರಿ ಗುಂಪಿನಲ್ಲಿ,
ಮಂಜಾಗುತ್ತಿದ್ದುವು ಮುದುಕರೆಲ್ಲರ ದೃಷ್ಟಿ ಅವಳನ್ನಟ್ಟಿ;
ಜಿಪ್ಸಿಗಳ ಬೀಡಿನಲ್ಲಿ ಕಟ್ಟಕಡೆ ಸಭಿಕ
ಸ್ತುತಿಸುವಂತೆ ಪತನಗೊಂಡ ವೈಭವವನ್ನ
ಬರೆಯುವುದಿದೊಂದೆ ಕೈ ಗತಿಸಿದ್ದನ್ನ.

ಮುಖಮಾಟ, ನಗು ಮಧುರವಾಗಿಸಿದ ಹೃದಯ
ಉಳಿಯುವುವು ಇವು, ಕಳೆದದ್ದನ್ನು ಕಡೆಯುವ ನಾನು.
ಮತ್ತೆ ನೆರೆಯುವುದು ಜನ ಹಳೆ ಜಾಗದಲ್ಲೆ,
ತಿಳಿಯದು ಅದಕ್ಕೆ ಅದೆ ರಸ್ತೆಯಲ್ಲೆ
ಹಿಂದೆಂದೂ ಒಂದು ದಿನ ನಡೆದಾಡಿತ್ತು ಎಂದು
ಉರಿಮುಗಿಲಿನಂತಿದ್ದ ವಸ್ತುವೊಂದು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಮಾಡ್‌ಗಾನಳ ವೈವಾಹಿಕ ಜೀವನ ಸಂತೃಪ್ತಿಕರವಾಗಿರಲಿಲ್ಲ. ಅವಳು ತನ್ನ ಗಂಡನಿಂದ ಬೇರೆಯಾಗಿ ವಾಸಿಸತೊಡಗಿದಳು. ಹಿಂದೆ ಅವಳನ್ನು ಗೌರವದಿಂದ ನಡೆಸಿಕೊಂಡ ಐರಿಷ್ ರಾಷ್ಟ್ರೀಯ ಚಳುವಳಿಯ ಜನ ಈಗ ಅವಳ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಂಡರು. ಅಂಥ ಸಂದರ್‍ಭಗಳು ಮನಸ್ಸಿನಲ್ಲಿ ಇರುತ್ತ ಏಟ್ಸ್ ಬರೆದ ಕವನ ಇದು.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...