ಪತನಗೊಂಡ ಘನತೆಗೆ

ಹಿಂದೊಮ್ಮೆ ಅವಳ ಮುಖ ನೋಡಲೆಂದೇ ಜನ
ನೆರೆಯುತ್ತಿದ್ದರು ಭಾರಿ ಗುಂಪಿನಲ್ಲಿ,
ಮಂಜಾಗುತ್ತಿದ್ದುವು ಮುದುಕರೆಲ್ಲರ ದೃಷ್ಟಿ ಅವಳನ್ನಟ್ಟಿ;
ಜಿಪ್ಸಿಗಳ ಬೀಡಿನಲ್ಲಿ ಕಟ್ಟಕಡೆ ಸಭಿಕ
ಸ್ತುತಿಸುವಂತೆ ಪತನಗೊಂಡ ವೈಭವವನ್ನ
ಬರೆಯುವುದಿದೊಂದೆ ಕೈ ಗತಿಸಿದ್ದನ್ನ.

ಮುಖಮಾಟ, ನಗು ಮಧುರವಾಗಿಸಿದ ಹೃದಯ
ಉಳಿಯುವುವು ಇವು, ಕಳೆದದ್ದನ್ನು ಕಡೆಯುವ ನಾನು.
ಮತ್ತೆ ನೆರೆಯುವುದು ಜನ ಹಳೆ ಜಾಗದಲ್ಲೆ,
ತಿಳಿಯದು ಅದಕ್ಕೆ ಅದೆ ರಸ್ತೆಯಲ್ಲೆ
ಹಿಂದೆಂದೂ ಒಂದು ದಿನ ನಡೆದಾಡಿತ್ತು ಎಂದು
ಉರಿಮುಗಿಲಿನಂತಿದ್ದ ವಸ್ತುವೊಂದು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಮಾಡ್‌ಗಾನಳ ವೈವಾಹಿಕ ಜೀವನ ಸಂತೃಪ್ತಿಕರವಾಗಿರಲಿಲ್ಲ. ಅವಳು ತನ್ನ ಗಂಡನಿಂದ ಬೇರೆಯಾಗಿ ವಾಸಿಸತೊಡಗಿದಳು. ಹಿಂದೆ ಅವಳನ್ನು ಗೌರವದಿಂದ ನಡೆಸಿಕೊಂಡ ಐರಿಷ್ ರಾಷ್ಟ್ರೀಯ ಚಳುವಳಿಯ ಜನ ಈಗ ಅವಳ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಂಡರು. ಅಂಥ ಸಂದರ್‍ಭಗಳು ಮನಸ್ಸಿನಲ್ಲಿ ಇರುತ್ತ ಏಟ್ಸ್ ಬರೆದ ಕವನ ಇದು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂವಿನ ಸಂಕಲ್ಪ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೧

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…