Home / ಲೇಖನ / ಇತರೆ / ಸಣ್ಣ ಸಂಗತಿ

ಸಣ್ಣ ಸಂಗತಿ

ಪ್ರಿಯ ಸಖಿ,
ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ವಾದುದು. ಕವಿ ಚಿತ್ರಿಸಿರುವ ಆ ಸಣ್ಣ ಸಂಗತಿಯಾದರೋ ಇಷ್ಟೆ ಸೋನೆ ಮಳೆ ಹಿಡಿದ ನಡುರಾತ್ರಿ. ಇತ್ತ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲ್ಲಿ ಅರ್ಧ ಕಣ್ಣು ಮುಚ್ಚಿ ಮಲಗಿದೆ. ಅದೂ ಬರಿಮೈಲಿ. ನಿದ್ದೆಗಣ್ಣಿನಲ್ಲೇ ಪಕ್ಕದಲ್ಲಿರುವ ತಾಯಿ ಕೈನೀಡಿ ಹೊದಿಕೆಯನ್ನು ಸರಿಪಡಿಸಿದ್ದಾಳೆ. ಆದರೆ ಮಗು
ಮತ್ತೆ ಹೊದಿಕೆಯನ್ನು ಕಿತ್ತೆಸೆದು ಬರಿ ಮೈಲಿ ಮಲಗುತ್ತದೆ. ಸುನೀತದ ಕೊನೆಯ ಎರಡು ಸಾಲು ಹೀಗಿದೆ.

ನಿದ್ದೆ ಎಚ್ಚರಗಳಲಿ ಪೊರೆವ ಕೈ ದುಡಿಯುತಿದೆ
ಅದನು ಲೆಕ್ಕಿಸದೆ ಮಗು ಹೊದಿಕೆಯನು ಒದೆಯುತಿದೆ

ಈ ಎರಡು ಸಾಲುಗಳಲ್ಲಿ ಎಂತಹಾ ಅರ್ಥ ತುಂಬಿದೆ ನೋಡಿದೆಯಾ ಸಖಿ. ತಾಯಿ-ಮಗುವಿನ ಸಂಬಂಧದಲ್ಲಾಗಲಿ ಸೃಷ್ಟಿಯೊಂದಿಗಿನ ಮಾನವನ
ಸಂಬಂಧದಲ್ಲಾಗಲಿ ತಾಯಿಯೂ ಸೃಷ್ಟಿಯೂ ಉನ್ನತವಾದ ಸ್ಥಾನದಲ್ಲಿ ನಿಂತು ಮಗುವೂ ಮಾನವನೂ ಅರಿತೂ ಮಾಡಿದ ತಪ್ಪುಗಳನ್ನು ಕ್ಷಮಿಸುತ್ತಲೇ ಇರುತ್ತಾರೆ. ಆದರೆ ಆ ಕ್ಷಮೆಗೆ ಬೆಲೆ ಕೊಡದ ಮಗು ಮಾನವ ತನ್ನ ಅಹಂಕಾರದಿಂದ, ತಾ ಮಾಡಿದ್ದೇ ಸರಿಯೆಂಬ ಗರ್ವದಿಂದ ಅದೇ ತಪ್ಪುಗಳನ್ನು ಮತ್ತೆ ಮತ್ತೆ ಮಾಡುತ್ತಲೇ ಇರುತ್ತಾನೆ. ಬಹುಶಃ ತಾಯಿಯೂ ಸೃಷ್ಟಿಯೂ ತೋರುವ ಕ್ಷಮೆಗೆ, ಮಗುವಿನ-ಮಾನವನ ತಪ್ಪುಗಳಿಗೆ ಕೊನೆಯೆಂಬುದೇ ಇಲ್ಲ! ಆದರೆ ತಾಯಿಯ ಸೃಷ್ಟಿಯ ಅಖಂಡ ಕ್ಷಮೆಗೂ ಮಿತಿಯೆಂಬುದೊಂದಿದೆ ಎಂದು ಅನ್ನಿಸುವುದಿಲ್ಲವೇ?  ಆ ಕ್ಷಮೆಯನ್ನು ಕಳೆದುಕೊಂಡ ಕೊನೆಯ ದಿನ ಬಹುಶಃ ಇಲ್ಲಿ ಏನೂ ಉಳಿದಿರುವುದಿಲ್ಲ! ಅಂತೂ ಮಾಡುವ ಅಂತಹಾ ಕ್ಷಮೆ ಇಲ್ಲದ ತಪ್ಪನ್ನು ನಾವ್ಯಾರೂ ಮಾಡದಂತೆ ಸಮಯ ಮೀರುವ ಮೊದಲೇ ಎಚ್ಚೆತ್ತುಕೊಳ್ಳಬೇಕಲ್ಲವೇ ಸಖಿ?

ಪೊರೆವ ಕೈಗಳ ದುಡಿಮೆಯನ್ನು ಲೆಕ್ಕಿಸದ ಮಗು ಹೊದಿಕೆಯನು ಮತ್ತೆ ಮತ್ತೆ ಒದೆದು ಮುಂದೊಮ್ಮೆ ಪೊರೆವ ಕೈಗಳ ಪ್ರೇಮವನ್ನೇ ಕಳೆದುಕೊಳ್ಳಬಾರದಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...