ಸಣ್ಣ ಸಂಗತಿ

ಪ್ರಿಯ ಸಖಿ,
ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ವಾದುದು. ಕವಿ ಚಿತ್ರಿಸಿರುವ ಆ ಸಣ್ಣ ಸಂಗತಿಯಾದರೋ ಇಷ್ಟೆ ಸೋನೆ ಮಳೆ ಹಿಡಿದ ನಡುರಾತ್ರಿ. ಇತ್ತ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲ್ಲಿ ಅರ್ಧ ಕಣ್ಣು ಮುಚ್ಚಿ ಮಲಗಿದೆ. ಅದೂ ಬರಿಮೈಲಿ. ನಿದ್ದೆಗಣ್ಣಿನಲ್ಲೇ ಪಕ್ಕದಲ್ಲಿರುವ ತಾಯಿ ಕೈನೀಡಿ ಹೊದಿಕೆಯನ್ನು ಸರಿಪಡಿಸಿದ್ದಾಳೆ. ಆದರೆ ಮಗು
ಮತ್ತೆ ಹೊದಿಕೆಯನ್ನು ಕಿತ್ತೆಸೆದು ಬರಿ ಮೈಲಿ ಮಲಗುತ್ತದೆ. ಸುನೀತದ ಕೊನೆಯ ಎರಡು ಸಾಲು ಹೀಗಿದೆ.

ನಿದ್ದೆ ಎಚ್ಚರಗಳಲಿ ಪೊರೆವ ಕೈ ದುಡಿಯುತಿದೆ
ಅದನು ಲೆಕ್ಕಿಸದೆ ಮಗು ಹೊದಿಕೆಯನು ಒದೆಯುತಿದೆ

ಈ ಎರಡು ಸಾಲುಗಳಲ್ಲಿ ಎಂತಹಾ ಅರ್ಥ ತುಂಬಿದೆ ನೋಡಿದೆಯಾ ಸಖಿ. ತಾಯಿ-ಮಗುವಿನ ಸಂಬಂಧದಲ್ಲಾಗಲಿ ಸೃಷ್ಟಿಯೊಂದಿಗಿನ ಮಾನವನ
ಸಂಬಂಧದಲ್ಲಾಗಲಿ ತಾಯಿಯೂ ಸೃಷ್ಟಿಯೂ ಉನ್ನತವಾದ ಸ್ಥಾನದಲ್ಲಿ ನಿಂತು ಮಗುವೂ ಮಾನವನೂ ಅರಿತೂ ಮಾಡಿದ ತಪ್ಪುಗಳನ್ನು ಕ್ಷಮಿಸುತ್ತಲೇ ಇರುತ್ತಾರೆ. ಆದರೆ ಆ ಕ್ಷಮೆಗೆ ಬೆಲೆ ಕೊಡದ ಮಗು ಮಾನವ ತನ್ನ ಅಹಂಕಾರದಿಂದ, ತಾ ಮಾಡಿದ್ದೇ ಸರಿಯೆಂಬ ಗರ್ವದಿಂದ ಅದೇ ತಪ್ಪುಗಳನ್ನು ಮತ್ತೆ ಮತ್ತೆ ಮಾಡುತ್ತಲೇ ಇರುತ್ತಾನೆ. ಬಹುಶಃ ತಾಯಿಯೂ ಸೃಷ್ಟಿಯೂ ತೋರುವ ಕ್ಷಮೆಗೆ, ಮಗುವಿನ-ಮಾನವನ ತಪ್ಪುಗಳಿಗೆ ಕೊನೆಯೆಂಬುದೇ ಇಲ್ಲ! ಆದರೆ ತಾಯಿಯ ಸೃಷ್ಟಿಯ ಅಖಂಡ ಕ್ಷಮೆಗೂ ಮಿತಿಯೆಂಬುದೊಂದಿದೆ ಎಂದು ಅನ್ನಿಸುವುದಿಲ್ಲವೇ?  ಆ ಕ್ಷಮೆಯನ್ನು ಕಳೆದುಕೊಂಡ ಕೊನೆಯ ದಿನ ಬಹುಶಃ ಇಲ್ಲಿ ಏನೂ ಉಳಿದಿರುವುದಿಲ್ಲ! ಅಂತೂ ಮಾಡುವ ಅಂತಹಾ ಕ್ಷಮೆ ಇಲ್ಲದ ತಪ್ಪನ್ನು ನಾವ್ಯಾರೂ ಮಾಡದಂತೆ ಸಮಯ ಮೀರುವ ಮೊದಲೇ ಎಚ್ಚೆತ್ತುಕೊಳ್ಳಬೇಕಲ್ಲವೇ ಸಖಿ?

ಪೊರೆವ ಕೈಗಳ ದುಡಿಮೆಯನ್ನು ಲೆಕ್ಕಿಸದ ಮಗು ಹೊದಿಕೆಯನು ಮತ್ತೆ ಮತ್ತೆ ಒದೆದು ಮುಂದೊಮ್ಮೆ ಪೊರೆವ ಕೈಗಳ ಪ್ರೇಮವನ್ನೇ ಕಳೆದುಕೊಳ್ಳಬಾರದಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರಣ ಯಾರಿಗೆ ಗೊತ್ತು ?
Next post ಚೈತ್ರ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys