Home / ಲೇಖನ / ಇತರೆ / ಸಣ್ಣ ಸಂಗತಿ

ಸಣ್ಣ ಸಂಗತಿ

ಪ್ರಿಯ ಸಖಿ,
ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ವಾದುದು. ಕವಿ ಚಿತ್ರಿಸಿರುವ ಆ ಸಣ್ಣ ಸಂಗತಿಯಾದರೋ ಇಷ್ಟೆ ಸೋನೆ ಮಳೆ ಹಿಡಿದ ನಡುರಾತ್ರಿ. ಇತ್ತ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲ್ಲಿ ಅರ್ಧ ಕಣ್ಣು ಮುಚ್ಚಿ ಮಲಗಿದೆ. ಅದೂ ಬರಿಮೈಲಿ. ನಿದ್ದೆಗಣ್ಣಿನಲ್ಲೇ ಪಕ್ಕದಲ್ಲಿರುವ ತಾಯಿ ಕೈನೀಡಿ ಹೊದಿಕೆಯನ್ನು ಸರಿಪಡಿಸಿದ್ದಾಳೆ. ಆದರೆ ಮಗು
ಮತ್ತೆ ಹೊದಿಕೆಯನ್ನು ಕಿತ್ತೆಸೆದು ಬರಿ ಮೈಲಿ ಮಲಗುತ್ತದೆ. ಸುನೀತದ ಕೊನೆಯ ಎರಡು ಸಾಲು ಹೀಗಿದೆ.

ನಿದ್ದೆ ಎಚ್ಚರಗಳಲಿ ಪೊರೆವ ಕೈ ದುಡಿಯುತಿದೆ
ಅದನು ಲೆಕ್ಕಿಸದೆ ಮಗು ಹೊದಿಕೆಯನು ಒದೆಯುತಿದೆ

ಈ ಎರಡು ಸಾಲುಗಳಲ್ಲಿ ಎಂತಹಾ ಅರ್ಥ ತುಂಬಿದೆ ನೋಡಿದೆಯಾ ಸಖಿ. ತಾಯಿ-ಮಗುವಿನ ಸಂಬಂಧದಲ್ಲಾಗಲಿ ಸೃಷ್ಟಿಯೊಂದಿಗಿನ ಮಾನವನ
ಸಂಬಂಧದಲ್ಲಾಗಲಿ ತಾಯಿಯೂ ಸೃಷ್ಟಿಯೂ ಉನ್ನತವಾದ ಸ್ಥಾನದಲ್ಲಿ ನಿಂತು ಮಗುವೂ ಮಾನವನೂ ಅರಿತೂ ಮಾಡಿದ ತಪ್ಪುಗಳನ್ನು ಕ್ಷಮಿಸುತ್ತಲೇ ಇರುತ್ತಾರೆ. ಆದರೆ ಆ ಕ್ಷಮೆಗೆ ಬೆಲೆ ಕೊಡದ ಮಗು ಮಾನವ ತನ್ನ ಅಹಂಕಾರದಿಂದ, ತಾ ಮಾಡಿದ್ದೇ ಸರಿಯೆಂಬ ಗರ್ವದಿಂದ ಅದೇ ತಪ್ಪುಗಳನ್ನು ಮತ್ತೆ ಮತ್ತೆ ಮಾಡುತ್ತಲೇ ಇರುತ್ತಾನೆ. ಬಹುಶಃ ತಾಯಿಯೂ ಸೃಷ್ಟಿಯೂ ತೋರುವ ಕ್ಷಮೆಗೆ, ಮಗುವಿನ-ಮಾನವನ ತಪ್ಪುಗಳಿಗೆ ಕೊನೆಯೆಂಬುದೇ ಇಲ್ಲ! ಆದರೆ ತಾಯಿಯ ಸೃಷ್ಟಿಯ ಅಖಂಡ ಕ್ಷಮೆಗೂ ಮಿತಿಯೆಂಬುದೊಂದಿದೆ ಎಂದು ಅನ್ನಿಸುವುದಿಲ್ಲವೇ?  ಆ ಕ್ಷಮೆಯನ್ನು ಕಳೆದುಕೊಂಡ ಕೊನೆಯ ದಿನ ಬಹುಶಃ ಇಲ್ಲಿ ಏನೂ ಉಳಿದಿರುವುದಿಲ್ಲ! ಅಂತೂ ಮಾಡುವ ಅಂತಹಾ ಕ್ಷಮೆ ಇಲ್ಲದ ತಪ್ಪನ್ನು ನಾವ್ಯಾರೂ ಮಾಡದಂತೆ ಸಮಯ ಮೀರುವ ಮೊದಲೇ ಎಚ್ಚೆತ್ತುಕೊಳ್ಳಬೇಕಲ್ಲವೇ ಸಖಿ?

ಪೊರೆವ ಕೈಗಳ ದುಡಿಮೆಯನ್ನು ಲೆಕ್ಕಿಸದ ಮಗು ಹೊದಿಕೆಯನು ಮತ್ತೆ ಮತ್ತೆ ಒದೆದು ಮುಂದೊಮ್ಮೆ ಪೊರೆವ ಕೈಗಳ ಪ್ರೇಮವನ್ನೇ ಕಳೆದುಕೊಳ್ಳಬಾರದಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್