Home / ಕವನ / ಅನುವಾದ / ಐರಿಷ್ ವೈಮಾನಿಕನ ಹಾಡು

ಐರಿಷ್ ವೈಮಾನಿಕನ ಹಾಡು

ಮೇಲೆ ಅಲೆವ ಮುಗಿಲಿನೊಳಗೆ ಹೀಗೇನೇ ಒಮ್ಮೆ
ಸಂಧಿಸುವೆನು ನನ್ನ ವಿಧಿಯ ಎಂದು ನಾನು ಬಲ್ಲೆ.
ಕಾದುವವರ ಕೂಡ ನನಗೆ ಇಲ್ಲ ಯಾವ ಹಗೆತನ,
ಯಾರಿಗಾಗಿ ಕಾದುವೆನೋ ಅವರೊಳಿಲ್ಲ ಒಗೆತನ.
ಕಿಲ್ಟಾರ್‍ಟನ್ ಕ್ರಾಸ್ ಎನ್ನುವ ದೇಶ ನನ್ನ ನಾಡು
ಕಿಲ್ಟಾರ್ಟನ್ ಬಡವರ ಜೊತೆ ಹಂಚಿಕೊಂಡೆ ಪಾಡು.
ನನ್ನ ಸಾವಿನಿಂದ ಏನೂ ಹಾನಿ ಇಲ್ಲ ಜನರಿಗೆ
ಸಂತಸವೂ ಇಲ್ಲ ನನ್ನ ಸಾವಿನಿಂದ ಅವರಿಗೆ.
ಯಾವುದೊಂದು ನಿಯಮಕೂ ಕರ್‍ತವ್ಯದ ಜ್ಞಾನಕೂ
ಹೋರಾಡುವನಲ್ಲ ಯಾವ ಗುಂಪಿನ ಪ್ರೋತ್ಸಾಹಕೂ;
ಥಟ್ಟನುಕ್ಕಿ ಬಂದ ಒಂದು ಯಾವುದೊ ಸುಮ್ಮಾನಕೆ
ಸಿಕ್ಕಿ ಬಂದೆ ಮುಗಿಲಿನೊಳಗೆ ಈ ಸಂಭ್ರಮಯಾನಕೆ.
ಹಿಂದೆ ಸಂದ ವರ್‍ಷಗಳು ವ್ಯರ್‍ಥಬಾಳು ಎನ್ನಿಸಿ,
ಮುಂದೆ ಬರುವ ವರ್‍ಷಗಳೂ ವ್ಯರ್‍ಥಕಾಲ ಎನ್ನಿಸಿ,
ಬಂದ ಎಲ್ಲ ಚಿಂತಿಸಿ, ಲೆಕ್ಕಾಚಾರ ತೂಗಿಸಿ
ಈ ಬಾಳಿನ ಜೊತೆಗೆ ಈ ಸಾವನು ಸರಿತೂಗಿಸಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಏಟ್ಸನ ಜನಪ್ರಿಯ ಕವನಗಳಲ್ಲಿ ಒಂದು. ಇಲ್ಲಿಯ ಐರಿಷ್ ವೈಮಾನಿಕ ಲೇಡಿ ಗ್ರೆಗರಿಯ ಮಗನಾದ ಮೇಜರ್ ರಾಬರ್‍ಟ್ ಗ್ರೆಗರಿ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...