ಐರಿಷ್ ವೈಮಾನಿಕನ ಹಾಡು

ಮೇಲೆ ಅಲೆವ ಮುಗಿಲಿನೊಳಗೆ ಹೀಗೇನೇ ಒಮ್ಮೆ
ಸಂಧಿಸುವೆನು ನನ್ನ ವಿಧಿಯ ಎಂದು ನಾನು ಬಲ್ಲೆ.
ಕಾದುವವರ ಕೂಡ ನನಗೆ ಇಲ್ಲ ಯಾವ ಹಗೆತನ,
ಯಾರಿಗಾಗಿ ಕಾದುವೆನೋ ಅವರೊಳಿಲ್ಲ ಒಗೆತನ.
ಕಿಲ್ಟಾರ್‍ಟನ್ ಕ್ರಾಸ್ ಎನ್ನುವ ದೇಶ ನನ್ನ ನಾಡು
ಕಿಲ್ಟಾರ್ಟನ್ ಬಡವರ ಜೊತೆ ಹಂಚಿಕೊಂಡೆ ಪಾಡು.
ನನ್ನ ಸಾವಿನಿಂದ ಏನೂ ಹಾನಿ ಇಲ್ಲ ಜನರಿಗೆ
ಸಂತಸವೂ ಇಲ್ಲ ನನ್ನ ಸಾವಿನಿಂದ ಅವರಿಗೆ.
ಯಾವುದೊಂದು ನಿಯಮಕೂ ಕರ್‍ತವ್ಯದ ಜ್ಞಾನಕೂ
ಹೋರಾಡುವನಲ್ಲ ಯಾವ ಗುಂಪಿನ ಪ್ರೋತ್ಸಾಹಕೂ;
ಥಟ್ಟನುಕ್ಕಿ ಬಂದ ಒಂದು ಯಾವುದೊ ಸುಮ್ಮಾನಕೆ
ಸಿಕ್ಕಿ ಬಂದೆ ಮುಗಿಲಿನೊಳಗೆ ಈ ಸಂಭ್ರಮಯಾನಕೆ.
ಹಿಂದೆ ಸಂದ ವರ್‍ಷಗಳು ವ್ಯರ್‍ಥಬಾಳು ಎನ್ನಿಸಿ,
ಮುಂದೆ ಬರುವ ವರ್‍ಷಗಳೂ ವ್ಯರ್‍ಥಕಾಲ ಎನ್ನಿಸಿ,
ಬಂದ ಎಲ್ಲ ಚಿಂತಿಸಿ, ಲೆಕ್ಕಾಚಾರ ತೂಗಿಸಿ
ಈ ಬಾಳಿನ ಜೊತೆಗೆ ಈ ಸಾವನು ಸರಿತೂಗಿಸಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಏಟ್ಸನ ಜನಪ್ರಿಯ ಕವನಗಳಲ್ಲಿ ಒಂದು. ಇಲ್ಲಿಯ ಐರಿಷ್ ವೈಮಾನಿಕ ಲೇಡಿ ಗ್ರೆಗರಿಯ ಮಗನಾದ ಮೇಜರ್ ರಾಬರ್‍ಟ್ ಗ್ರೆಗರಿ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾಜಿನ ಅರಮನೆ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೪

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…