Home / ಲೇಖನ / ಇತರೆ / ಕಂದರಗಳು ತೆರೆದಿವೆ!

ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...