Home / ಲೇಖನ / ಇತರೆ / ಕಂದರಗಳು ತೆರೆದಿವೆ!

ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...