Home / ಲೇಖನ / ಇತರೆ / ಕಂದರಗಳು ತೆರೆದಿವೆ!

ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...