ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾರಯ್ಯ
Next post ಪ್ರತ್ಯಕ್ಷ ದೇವರು

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys