Home / ಲೇಖನ / ಇತರೆ / ಕಂದರಗಳು ತೆರೆದಿವೆ!

ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...