ಕಂದರಗಳು ತೆರೆದಿವೆ!

ಪ್ರಿಯ ಸಖಿ,
ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿಷಾದದಿಂದ ಹೀಗೆ ಹೇಳುತ್ತಾರೆ.
ಎದೆ ಎದೆಗಳ
ನಡುವೆ ಇರುವ
ಸೇತುವೆಗಳು ಮುರಿದಿವೆ
ಭಯ, ಸಂಶಯ, ತಲ್ಲಣಗಳ
ಕಂದರಗಳು ತೆರೆದಿವೆ!

ಹೌದಲ್ಲವೇ ಸಖೀ ಇತ್ತೀಚೆಗೆ ಎಲ್ಲಾ ಸಂಬಂಧಗಳಲ್ಲೂ ಎಂತದೋ ಒಂದು ನಾಟಕೀಯತೆಯನ್ನು ಕಾಣುತ್ತಿದ್ದೇವೆ. ಇದು ಭಾವಪೂರ್ಣ, ಹೃದಯದಾಳದಿಂದ
ಬಂದ ಸಂವೇದನೆ ಎನ್ನಿಸುವುದೇ ಇಲ್ಲ. ಎಲ್ಲದರಲ್ಲಿಯೂ ಕೃತ್ರಿಮತೆ, ತೋರಿಕೆಯ ಆತ್ಮೀಯತೆ ಎದ್ದುಕಾಣುತ್ತದೆ. ಮನಸ್ಸು ಗೊಂದಲದಲ್ಲಿ ಸಿಲುಕಿ ಎಷ್ಟು
ಭಯಭೀತಗೊಂಡಿದೆಯೆಂದರೆ ಅದರಲ್ಲಿ ಸದಾ ಸಂಶಯ, ತಲ್ಲಣಗಳು ಧವಧವಿಸುತ್ತಿರುತ್ತವೆ. ಯಾರಮೇಲೆಯೂ ನಂಬಿಕೆ ಇಲ್ಲ. ಸ್ವತಹ ತನ್ನ ಮೇಲೂ ನ೦ಬಿಕೆ ಇಲ್ಲ. ಕವನವನ್ನು ಮು೦ದುವರೆಸುತ್ತಾ ಕವಿ
ಮುಖ ಮುಖವೂ
ಮುಖವಾಡವ
ತೊಟ್ಟುನಿಂತ ಹಾಗಿವೆ
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ !

ಎನ್ನುತ್ತಾರೆ, ಇದೆಲ್ಲಾ ಪ್ರಾರಂಭವಾದದ್ದಾದರೂ ಎಲ್ಲಿಂದಾ ? ಮನಸ್ಸುಗಳ ಮಧ್ಯೆ ಮುರಿದು ಬಿದ್ದಿರುವ ಸೇತುವೆಗಳನ್ನು ಇನ್ನಾದರೂ ಸರಿಪಡಿಸಬೇಕಲ್ಲವೇ ಸಖಿ ? ವ್ಯಕ್ತಿ – ವ್ಯಕ್ತಿಯ ನಡುವಿನ ನಂಬಿಕೆಗಳು ಉಳಿಯಬೇಕಾದರೆ, ಉಳಿದು ಬೆಳೆಯಬೇಕಾದರೆ ವ್ಯಕ್ತಿ ಮೊದಲು ಪ್ರಾಮಾಣಿಕನಾಗಬೇಕು. ಅವನು ತೊಟ್ಟ ಎಲ್ಲ ಮುಖವಾಡಗಳನ್ನೂ ಕಿತ್ತೂಗೆದು, ನಿಜದ ಮುಖದೊಂದಿಗೆ ಮುಖಾಮುಖಿ ನಿಲ್ಲಬೇಕು. ಗೆಲ್ಲಬೇಕು. ಆಗಲೇ ಇತರರ ಮೇಲೆಯೂ ನಂಬಿಕೆ ಮೂಡೀತು! ಸೇತುವೆಗಳು ಎದ್ದೀತು! ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾರಯ್ಯ
Next post ಪ್ರತ್ಯಕ್ಷ ದೇವರು

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…