Home / ಕವನ / ಕವಿತೆ / ನನ್ನೊಳಗೊಬ್ಬ ಸೈತಾನ

ನನ್ನೊಳಗೊಬ್ಬ ಸೈತಾನ

ನನ್ನೊಳಗೊಬ್ಬ ಸೈತಾನ
ಯಾವಾಗಲೂ ಇರುತಾನ
ನಾನೆಚ್ಚರಿರಲಿ ನಿದ್ರಿಸುತಿರಲಿ
ತನ್ನಿಚ್ಛೆಯಂತೆ ಕುಣಿಸುತಾನ
ಕುಣಿಸುತಾನ ದಣಿಸುತಾನ
ಮನಸೋ‌ಇಚ್ಛೆ ಮಣಿಸುತಲು ಇರುತಾನ

ಎಲ್ಲರನು ಬಯ್ಯುತಾನ
ಬಡಿಯಲು ಕೈಯೆತ್ತುತಾನ
ಕೊಂದು ಕೂಗುತಾನ
ಯಾವಾಗಲೂ ಏನೊ ಒಂದು
ಸಂಚು ನಡೆಸುತಿರುತಾನ
ನಡೆವವರ ಕಾಲೆಳೆದು
ಬೀಳೋದು ನೋಡಿ ನಗುತಾನ

ಸತ್ಯ ಹೇಳಲು ಹೊರಟರೆ
ಇಕ್ಕಳ ಹಾಕಿ ಎಳೀತಾನ
ನ್ಯಾಯ ನುಡಿಯಲು ಹೊರಟರೆ
ಬೀಗ ಬಡಿದುಬಿಡುತಾನ

ಕಣ್ಣಿಗೆ ಪರದೆ ಕಟ್ಟುತಾನ
ಕಿವಿಗೆ ಗಂಗಳ ಮೆತ್ತುತಾನ
ಮನಕೆ ಮಂಕು ಹೊದಿಸುತಾನ
ಎದೆಗೆ ಸೀಸ ಹೊಯ್ಯುತಾನ
ಅಫೀಮು ತಿನ್ಸಿ ಮಲಗಿಸ್ತಾನ
ಕುಡಿಸಿ ನನ್ನ ತಲೀನೆ ಕೆಡಿಸಿಬಿಡ್ತಾನ

ದೇವರೆಂದರೆ ಅದು ಸೋಹಂ ಅಂತಾನ
ದೈವವೆಂದರೆ ಅದೂ ಸ್ವಯಂ ಅಂತಾನ
ಸ್ವರ್ಗ ಇರೋದು ತನ್ನೊಳಗೆ
ಸರ್‍ವಸಾಧನಾ ಮಾರ್‍ಗ ತನ್ನೊಳಗೆ
ಯಾರು ಯಾರಿಗೋ ಶರಣಾಗ್ತಿ
ತನಗೇ ಆಗು ಅಂತಾನ

ಮೊದಲ ಕೊಲೆಯೇ ಕಷ್ಟಂತ
ಅಮೇಲದೇ ಮಜಂತ
ಮೊದಲ ಹಾದರವೆ ಭೀತೀಂತ
ಆಮೇಲದೇ ಪ್ರೀತೀಂತ

ಪಾಪ ಪುಣ್ಯಗಳಿಲ್ಲಂತ
ಇರುವುದೊಂದೇ ಸ್ವಂತಾಂತ
ಸ್ವಂತಕೇನು ಬೇಕೋ ಅದ
ನೀಡೋದೆ ನಿನ್ನ ಸುಖಾಂತ

ಅಂತನೆ ಇರ್‍ತಾನೇನ ಮಾಡಲಿ
ಹೆಂಗೆ ಹೋರಾಡಲಿ ಇವನ
ನನ್ನೊಳಗೇ ಇರುವಾತನ
ನನ್ನ ಕೊಲ್ಲದೆ ನಾನಿವನ
ಹೆಂಗೆ ಕೊಲ್ಲಲಿ ಒಳಗಿನವನ
ಇವನಿರದೆ ನಾನಾದರು
ಹೆಂಗಿರಲಿ ಜೀವಸಹಿತ

ನಾ ಗಾಳಿಪಟವಾದರೆ
ಇವನೇ ದಾರಾಂತ
ಇವ ಜಗ್ಗದಿದ್ದರೆ ನಾ
ಬೀಳೋದು ಖಚಿತಾಂತ
ಎಳೆದಾಗಲೇ ನಾ ಮೇಲಕೆ ಮೇಲಕೆ
ಏರೋದಂತ
ಸ್ವರ್‍ಗವ ಕಂಡಂತನಿಸೋದಂತ
ಓ ದೇವರೆ ನನ್ನ
ಕ್ಷಮಿಸೂ ಅಂತ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...