Home / ಕವನ / ಕವಿತೆ / ನನ್ನೊಳಗೊಬ್ಬ ಸೈತಾನ

ನನ್ನೊಳಗೊಬ್ಬ ಸೈತಾನ

ನನ್ನೊಳಗೊಬ್ಬ ಸೈತಾನ
ಯಾವಾಗಲೂ ಇರುತಾನ
ನಾನೆಚ್ಚರಿರಲಿ ನಿದ್ರಿಸುತಿರಲಿ
ತನ್ನಿಚ್ಛೆಯಂತೆ ಕುಣಿಸುತಾನ
ಕುಣಿಸುತಾನ ದಣಿಸುತಾನ
ಮನಸೋ‌ಇಚ್ಛೆ ಮಣಿಸುತಲು ಇರುತಾನ

ಎಲ್ಲರನು ಬಯ್ಯುತಾನ
ಬಡಿಯಲು ಕೈಯೆತ್ತುತಾನ
ಕೊಂದು ಕೂಗುತಾನ
ಯಾವಾಗಲೂ ಏನೊ ಒಂದು
ಸಂಚು ನಡೆಸುತಿರುತಾನ
ನಡೆವವರ ಕಾಲೆಳೆದು
ಬೀಳೋದು ನೋಡಿ ನಗುತಾನ

ಸತ್ಯ ಹೇಳಲು ಹೊರಟರೆ
ಇಕ್ಕಳ ಹಾಕಿ ಎಳೀತಾನ
ನ್ಯಾಯ ನುಡಿಯಲು ಹೊರಟರೆ
ಬೀಗ ಬಡಿದುಬಿಡುತಾನ

ಕಣ್ಣಿಗೆ ಪರದೆ ಕಟ್ಟುತಾನ
ಕಿವಿಗೆ ಗಂಗಳ ಮೆತ್ತುತಾನ
ಮನಕೆ ಮಂಕು ಹೊದಿಸುತಾನ
ಎದೆಗೆ ಸೀಸ ಹೊಯ್ಯುತಾನ
ಅಫೀಮು ತಿನ್ಸಿ ಮಲಗಿಸ್ತಾನ
ಕುಡಿಸಿ ನನ್ನ ತಲೀನೆ ಕೆಡಿಸಿಬಿಡ್ತಾನ

ದೇವರೆಂದರೆ ಅದು ಸೋಹಂ ಅಂತಾನ
ದೈವವೆಂದರೆ ಅದೂ ಸ್ವಯಂ ಅಂತಾನ
ಸ್ವರ್ಗ ಇರೋದು ತನ್ನೊಳಗೆ
ಸರ್‍ವಸಾಧನಾ ಮಾರ್‍ಗ ತನ್ನೊಳಗೆ
ಯಾರು ಯಾರಿಗೋ ಶರಣಾಗ್ತಿ
ತನಗೇ ಆಗು ಅಂತಾನ

ಮೊದಲ ಕೊಲೆಯೇ ಕಷ್ಟಂತ
ಅಮೇಲದೇ ಮಜಂತ
ಮೊದಲ ಹಾದರವೆ ಭೀತೀಂತ
ಆಮೇಲದೇ ಪ್ರೀತೀಂತ

ಪಾಪ ಪುಣ್ಯಗಳಿಲ್ಲಂತ
ಇರುವುದೊಂದೇ ಸ್ವಂತಾಂತ
ಸ್ವಂತಕೇನು ಬೇಕೋ ಅದ
ನೀಡೋದೆ ನಿನ್ನ ಸುಖಾಂತ

ಅಂತನೆ ಇರ್‍ತಾನೇನ ಮಾಡಲಿ
ಹೆಂಗೆ ಹೋರಾಡಲಿ ಇವನ
ನನ್ನೊಳಗೇ ಇರುವಾತನ
ನನ್ನ ಕೊಲ್ಲದೆ ನಾನಿವನ
ಹೆಂಗೆ ಕೊಲ್ಲಲಿ ಒಳಗಿನವನ
ಇವನಿರದೆ ನಾನಾದರು
ಹೆಂಗಿರಲಿ ಜೀವಸಹಿತ

ನಾ ಗಾಳಿಪಟವಾದರೆ
ಇವನೇ ದಾರಾಂತ
ಇವ ಜಗ್ಗದಿದ್ದರೆ ನಾ
ಬೀಳೋದು ಖಚಿತಾಂತ
ಎಳೆದಾಗಲೇ ನಾ ಮೇಲಕೆ ಮೇಲಕೆ
ಏರೋದಂತ
ಸ್ವರ್‍ಗವ ಕಂಡಂತನಿಸೋದಂತ
ಓ ದೇವರೆ ನನ್ನ
ಕ್ಷಮಿಸೂ ಅಂತ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...