Home / ಕವನ / ಕವಿತೆ / ಒಬ್ಬನೆಂದರೊಬ್ಬನೇ

ಒಬ್ಬನೆಂದರೊಬ್ಬನೇ

ಒಬ್ಬನೆಂದರೊಬ್ಬನೇ
ಒಬ್ಬನೊಳಗೆ ಇಬ್ಬನೇ
ಇಬ್ಬನೇ ಮೂವನೇ
ಒಬ್ಬನೊಳಗೆ ಎಷ್ಟನೇ

ಒಂದು ಒಡಲ ನೋಡಿ ನಾವು
ಒಬ್ಬನೆನುವೆವು
ಒಂದು ಒಡಲಿಗೊಬ್ಬನೇ
ಎಂದುಕೊಳುವೆವು

ಒಬ್ಬನಲ್ಲ ಇಬ್ಬನಲ್ಲ
ಒಳಗಿರುವವನಿಗೆ ಲೆಕ್ಕವಿಲ್ಲ
ಬಂದು ಹೋಗಿ ಮಾಡುತಾರೆ
ಒಕ್ಕಲಿಗರೆ ಎಲ್ಲರೂ

ಒಬ್ಬನೆಂದು ಯಾರು ಇಲ್ಲ
ಒಬ್ಬರನೊಬ್ಬ ಒತ್ತುತ್ತಾರೆ
ತಳ್ಳಿ ಜಾಗ ಮಾಡುತಾರೆ
ಆಚೆ ಈಚೆ ನಿಲ್ಲುತಾರೆ

ನೆರಳಿನಲ್ಲಿ ಅಡಗುತಾರೆ
ಸಮಯ ಕಾಯುತಿರುತಾರೆ
ಅಂದುಕೊಳ್ಳದಿರುವಾಗ
ಮುಂದೆ ಕಾಣಿಸಿಕೊಳ್ಳುತಾರೆ

ಮುಂಜಾನೆ ಕಂಡವನೇ
ಸಂಜೆ ಹಾಗೇ ಇರುತಾನೆಯೆ
ಹಗಲು ನಗುತ ಇದ್ದವನೆ
ಇರುಳು ಅಳುತ ಇದ್ದಾನೆಯೆ

ಒಬ್ಬರನೊಬ್ಬರು ಕೆಣಕುತಾರೆ
ಪರಸ್ಪರ ದೂರುತ್ತಾರೆ
ನೀನು ತಾನು ಎನುತಾರೆ
ತಪ್ಪು ಯಾರೂ ಒಪ್ಪಿಕೊಳರು
ತಾವೇ ಸರಿ ಎನುವರು

ಕ್ಷಣಕ್ಷಣವು ಬದಲಾವಣೆ
ಇದ್ದಂತೆಯೆ ಇರುವುದಿಲ್ಲ
ಪಾಪಿಯಿಂದು ಸಂತ ನಾಳೆ
ನಿನ್ನೆಯ ಆರೋಪಿಯೇ
ಈವತ್ತು ನ್ಯಾಯಾಧೀಶನು

ಯಾರ ನೀನು ಹಳಿಯುವಿ
ಯಾರ ಹಾಡಿ ಹೊಗಳುವಿ
ಒಂದೆ ಒಡಲ ಮನದ ಪರಿಯ
ಹೇಗ ಅರಿಯುವಿ

ಮನವೆಂಬುದು ಅತಿ ವಿಚಿತ್ರ
ಬರೆದರಿಲ್ಲ ಅದರ ಚಿತ್ರ
ಭಾಷೆ ಕೂಡ ಸೋಲುವುದು
ಅದರ ರೀತಿ ಹಿಡಿಯಲು

ಒಬ್ಬನಲ್ಲ ನೀನು ನಾನು
ನನ್ನೊಳಗೆ ನಿನ್ನ ಭಾವ
ನಿನ್ನೊಳಗೆ ನನ್ನ ಭಾವ
ಅದಲುಬದಲು ಆಗುವೆವು

ನಿನ್ನ ಮನದ ಗಾಯವೆ
ನನ್ನೊಳಗೂ ವೇದನೆ
ನಿನ್ನ ಸಂತೋಷವೆ
ಕಿಂಚಿದೂನು ನನ್ನದೆನೆ

ನೀನು ಯಾರು ನಾನು ಯಾರು
ಒಬ್ಬನಲ್ಲ ಸಹಸ್ರ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...