ಹೂವಿನ ಸಂಕಲ್ಪ

ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು.

ಕೆಲವೇ ಕ್ಷಣದಲ್ಲಿ ಮಂದಾನಿಲ ಬಂದು “ಹೂವೇ! ಹೂವೇ!” ಎಂದು ಬೆನ್ನು ತಟ್ಟಿ ಮಾತನಾಡಿಸಿತು. ಹೂವು ತನ್ನ ಧ್ಯಾನದ ನಿಲುವನ್ನು ತೊರೆಯಲಿಲ್ಲ.

ಬೆಳಕು ಬೀರುತ್ತ ಬೆಳ್ಳಿ ಕಿರಣ ಓಡಿ ಒಂದು-
“ಹೂವೇ! ಹೂವೇ! ನಿನ್ನ ಸಖನ ನೆನಪಿಲ್ಲವೇ?” ಎಂದು ಕೇಳಿತು.
ಸುಮನದ ಧ್ಯಾನದ ರೆಪ್ಪೆ ದಳ ಅಲಗಲಿಲ್ಲ.
ಧ್ಯಾನದ ಮೌನ ಮುಂದುವರಿಯಿತು.

ಮಧ್ಯಾಹ್ನ ಸೂರ್‍ಯ ನೆತ್ತಿಗೇರಿ ಬಂದು ಹೂ ಹೃದಯವನ್ನು ಕಲುಕಲು ನೋಡಿದ. ಹೂವು ಉರಿಬಿಸಲನ್ನು ಸಹಿಸಿ ಧ್ಯಾನ ಮುಂದುವರಿಸಿತು.

ಮತ್ತೆ “ಸಂಧ್ಯಾ” ಮೆಲ್ಲನೆ ಹೆಜ್ಜೆ ಇಟ್ಟು ಬಂದು “ಕಣ್ಣು ಮುಚ್ಚಾಲೆ ಆಡೋಣವೇ”? ಎಂದು ಪಿಸು ಗುಟ್ಟಿತು.

“ಮೂಕ ಮೌನ, ಮುನಿಸೇಕೆ? ಬಾ ಸಖಿ” ಎಂದು ಗೋಗರಿಯಿತು.

ಹೂವು ಕಣ್ಣು ತೆರೆಯಲಿಲ್ಲ, ಬಾಯಿ ಬಿಡಲಿಲ್ಲ. ಮೌನದಲ್ಲಿ ಮುಂದುವರಿಯಿತು.

ಸಂಜೆಗತ್ತಲೆ ತೆರೆ ಎಳೆದೊಡನೆ “ನಿಶೆ” ಕತ್ತಲೆಯ ಹೊದಿಕೆ ಹೊದ್ದು ಕಳ್ಳನಂತೆ ಹೂ ಹೃದಯ ಕದಿಯಲು ಬಂದಿತು.

“ಮೇಲೆ, ಆಗಸ, ಚಂದ್ರಮನ ಚೆಲುವು ನೋಡು, ಬೆಳದಿಂಗಳ ಹಾಡು ಕೇಳು, ನಕ್ಷತ್ರದ ನಾಟ್ಯನೋಡು. ನಿಶಾ ತೊಳಿನ ಅಪ್ಪುಗೆಗೆ ನೀ ಬರಲು ಏಕೆ ತಡ? ಸುಮನ, ನಿನ್ನ ಸಮಾಗಮಕ್ಕಾಗಿ ನಾ ಪರಿತಪಿಸುತಿರುವೆ” ಎಂದಿತು. ಹೂವಿನ ಧ್ಯಾನ, ತಪ ಹಾಗೆ ಮುಂದುವರೆದಿತ್ತು.

ಮಧ್ಯರಾತ್ರಿ ಹಿಮ ಬಿರುಗಾಳಿ ಅಪ್ಪಳಿಸಿ ಬಂತು. ಹೂವಿನ ಪಕಳೆಗಳೆಲ್ಲಾ ಉದರಿ ಮಣ್ಣು ಸೇರಿತು. ಅದರೊಡನೆ ಹೂಗರ್‍ಭದಲ್ಲಿ ಅಡಗಿದ್ದ ಧ್ಯಾನ ಬೀಜ ಮೃಣ್ಮಯವ ಸೇರಿ ಚಿನ್ಮಯವಾಯಿತು. ಬಿರುಗಾಳಿಗೆ ಸೋಲಾಯಿತು. ಹೂವಿನ ಹೃದಯ ನನ್ನಾದಾಗಲಿಲ್ಲ ಎಂದು, ರೊಯ್ಯನೆ ರೋದಿಸುತ್ತ ಬೆಳಗು ಮೂಡುವುದರಲ್ಲಿ ಸಮುದ್ರಗರ್‍ಭದಲ್ಲಿ ಬಚ್ಚಿಟ್ಟು ಕೊಂಡಿತು. ಹೂ ಸಂಕಲ್ಪಕ್ಕೆ ಸ್ವರ್‍ಗ ಕೈಗೆಟುಕಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೆಲ್ಲಿ
Next post ಪತನಗೊಂಡ ಘನತೆಗೆ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys