Home / ಕಥೆ / ಕಿರು ಕಥೆ / ಹೂವಿನ ಸಂಕಲ್ಪ

ಹೂವಿನ ಸಂಕಲ್ಪ

ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು.

ಕೆಲವೇ ಕ್ಷಣದಲ್ಲಿ ಮಂದಾನಿಲ ಬಂದು “ಹೂವೇ! ಹೂವೇ!” ಎಂದು ಬೆನ್ನು ತಟ್ಟಿ ಮಾತನಾಡಿಸಿತು. ಹೂವು ತನ್ನ ಧ್ಯಾನದ ನಿಲುವನ್ನು ತೊರೆಯಲಿಲ್ಲ.

ಬೆಳಕು ಬೀರುತ್ತ ಬೆಳ್ಳಿ ಕಿರಣ ಓಡಿ ಒಂದು-
“ಹೂವೇ! ಹೂವೇ! ನಿನ್ನ ಸಖನ ನೆನಪಿಲ್ಲವೇ?” ಎಂದು ಕೇಳಿತು.
ಸುಮನದ ಧ್ಯಾನದ ರೆಪ್ಪೆ ದಳ ಅಲಗಲಿಲ್ಲ.
ಧ್ಯಾನದ ಮೌನ ಮುಂದುವರಿಯಿತು.

ಮಧ್ಯಾಹ್ನ ಸೂರ್‍ಯ ನೆತ್ತಿಗೇರಿ ಬಂದು ಹೂ ಹೃದಯವನ್ನು ಕಲುಕಲು ನೋಡಿದ. ಹೂವು ಉರಿಬಿಸಲನ್ನು ಸಹಿಸಿ ಧ್ಯಾನ ಮುಂದುವರಿಸಿತು.

ಮತ್ತೆ “ಸಂಧ್ಯಾ” ಮೆಲ್ಲನೆ ಹೆಜ್ಜೆ ಇಟ್ಟು ಬಂದು “ಕಣ್ಣು ಮುಚ್ಚಾಲೆ ಆಡೋಣವೇ”? ಎಂದು ಪಿಸು ಗುಟ್ಟಿತು.

“ಮೂಕ ಮೌನ, ಮುನಿಸೇಕೆ? ಬಾ ಸಖಿ” ಎಂದು ಗೋಗರಿಯಿತು.

ಹೂವು ಕಣ್ಣು ತೆರೆಯಲಿಲ್ಲ, ಬಾಯಿ ಬಿಡಲಿಲ್ಲ. ಮೌನದಲ್ಲಿ ಮುಂದುವರಿಯಿತು.

ಸಂಜೆಗತ್ತಲೆ ತೆರೆ ಎಳೆದೊಡನೆ “ನಿಶೆ” ಕತ್ತಲೆಯ ಹೊದಿಕೆ ಹೊದ್ದು ಕಳ್ಳನಂತೆ ಹೂ ಹೃದಯ ಕದಿಯಲು ಬಂದಿತು.

“ಮೇಲೆ, ಆಗಸ, ಚಂದ್ರಮನ ಚೆಲುವು ನೋಡು, ಬೆಳದಿಂಗಳ ಹಾಡು ಕೇಳು, ನಕ್ಷತ್ರದ ನಾಟ್ಯನೋಡು. ನಿಶಾ ತೊಳಿನ ಅಪ್ಪುಗೆಗೆ ನೀ ಬರಲು ಏಕೆ ತಡ? ಸುಮನ, ನಿನ್ನ ಸಮಾಗಮಕ್ಕಾಗಿ ನಾ ಪರಿತಪಿಸುತಿರುವೆ” ಎಂದಿತು. ಹೂವಿನ ಧ್ಯಾನ, ತಪ ಹಾಗೆ ಮುಂದುವರೆದಿತ್ತು.

ಮಧ್ಯರಾತ್ರಿ ಹಿಮ ಬಿರುಗಾಳಿ ಅಪ್ಪಳಿಸಿ ಬಂತು. ಹೂವಿನ ಪಕಳೆಗಳೆಲ್ಲಾ ಉದರಿ ಮಣ್ಣು ಸೇರಿತು. ಅದರೊಡನೆ ಹೂಗರ್‍ಭದಲ್ಲಿ ಅಡಗಿದ್ದ ಧ್ಯಾನ ಬೀಜ ಮೃಣ್ಮಯವ ಸೇರಿ ಚಿನ್ಮಯವಾಯಿತು. ಬಿರುಗಾಳಿಗೆ ಸೋಲಾಯಿತು. ಹೂವಿನ ಹೃದಯ ನನ್ನಾದಾಗಲಿಲ್ಲ ಎಂದು, ರೊಯ್ಯನೆ ರೋದಿಸುತ್ತ ಬೆಳಗು ಮೂಡುವುದರಲ್ಲಿ ಸಮುದ್ರಗರ್‍ಭದಲ್ಲಿ ಬಚ್ಚಿಟ್ಟು ಕೊಂಡಿತು. ಹೂ ಸಂಕಲ್ಪಕ್ಕೆ ಸ್ವರ್‍ಗ ಕೈಗೆಟುಕಿತ್ತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...