Home / ಕಥೆ / ಕಿರು ಕಥೆ / ಗಾಜಿನ ಅರಮನೆ

ಗಾಜಿನ ಅರಮನೆ

ತೋಟದಲ್ಲಿ ತಿರುಗುವಾಗ ಭುಜವೇರಿ ಬಂದಿತ್ತು ಒಂದು ಕಂಬಳಿ ಹುಳು. ಮೈ ನವೆ ತಡೆಯಲಾರದೆ ಸಿಟ್ಟಿನಿಂದ ಕಂಬಳಿ ಹುಳುವನ್ನು ಒಂದು ಸೀಸೆಯಲ್ಲಿ ಹಾಕಿ ಬಂಧಿಸಿಟ್ಟ ತೋಟದ ಮಾಲಿ. ಗಿಡಗಳಿಗೆ ನೀರು ಹಾಕುವಾಗ ಕನಿಕರ ಗೊಂಡು ನಾಲಕ್ಕು ಎಲೆ ಆಹಾರ ಹಾಕಿ ದಿನವೂ ನೋಡುತ್ತಿದ್ದ. ಹಲವು ದಿನದೊಳಗೆ ಕಂಬಳಿ ಹುಳು ಚಿಟ್ಟೆಯಾಯಿತು. ಕಪ್ಪು ಕಂಬಳಿಯ ಬಿಟ್ಟು ರಂಗುರಂಗಿನ ರೆಕ್ಕೆ ಹೊದ್ದಿತು. ಪಟಪಟ ರೆಕ್ಕೆ ಬಡಿಯಿತು. ತನ್ನ ರೆಕ್ಕೆ ಸಾಗರ ಭೂಮಿ ಮುಟ್ಟಿದೆ ಎಂದು ಸಂತಸ ಪಟ್ಟಿತು. ತಾನಿರುವಲ್ಲಿಗೆ ಸೂರ್‍ಯ, ಚಂದ್ರ, ಗಾಳಿ, ಆಗಸ ಎಲ್ಲವೂ ಬರುತ್ತಿದೆ, ಎಂಬ ಭ್ರಮೆಯಲ್ಲಿತ್ತು. ಗಾಜಿನ ಮನೆಯ ಬಂಧನದ ಅರಿವು ಅದಕ್ಕೆ ಇರಲಿಲ್ಲ.

ಗಾಜಿನ ಬಾಟಲಿನಲ್ಲಿ ಹಾರುತ್ತಿದ್ದ ಚಿಟ್ಟೆಯನ್ನು ನೋಡಿ ತೋಟದ ಮಾಲಿ ಅದರ ಬಾಯಿಗೆ ಬಿರಟೆ ಇಟ್ಟ. ಚಿಟ್ಟೆ ಚೀರಿತು.

“ಇದೇನು ನಾ ಕಂಡ ಆಗಸ, ಭೂಮಿ, ಸೂರ್‍ಯ ಚಂದ್ರರೆ ನನ್ನ ಉಸುರು ಕಟ್ಟಿಸುತ್ತಿದ್ದಾರೆ” ಎಂದುಕೊಂಡಿತು. ಉಸುರು ಕಟ್ಟಿ ಸಾಯುವಾಗ ಮಾಲಿ ಮಾತು ಕೇಳಿಸಿತು.

“ಗಾಜಿನ ಅರಮನೆ ಹೇಗಿದೆ?” ಎಂದು. ಆಗ ಚಿಟ್ಟೆಗೆ ಜ್ಞಾನೋದಯವಾಯಿತು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...