Home / ಲೇಖನ / ಇತರೆ / ಮಡಿಕೇರಿಯ ನೆನಪು

ಮಡಿಕೇರಿಯ ನೆನಪು

೧೯೮೩-೧೯೮೪ರಲ್ಲಿ ಮಡಿಕೇರಿಯಲ್ಲಿ ಪ್ರಥಮ ದರ್‍ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆಯಲ್ಲಿದ್ದೆ. ಮಡಿಕೇರಿ ನನ್ನ ಅನ್ನ ದೇವರು. ಎಲ್ಲಿದ್ದರು ಹೇಗಿದ್ದರು ಎಂತಿದ್ದರೂ ಮಡಿಕೇರಿ ಮೇಲಿಂದ ಮೇಲೆ ಕಣ್ಣ ಮುಂದೆ ಮೆರವಣಿಗೆ ಹೊರಡುವುದು.

ಪ್ರತಿ ಮಳೆಗಾಲದ ದಿನಮಾನಗಳಲ್ಲಿ ಮಡಿಕೇರಿ ಸವಿಸವಿ ನೆನಪು ತರುವುದು. ಇದು ಅಲ್ಲದೆ ೧೯೯೮-೧೯೯೯ರಲ್ಲಿ ಮಡಿಕೇರಿಯಲ್ಲಿ ಇರುವ ಬಂದು ಹೋಗುವ ೨೦೧೧-೨೦೧೨ರಲ್ಲಿ ಮತ್ತೆ ಮಡಿಕೇರಿಗೆ ಹೋಗಿ ಬರುವ ಸುವರ್‍ಣಾವಕಾಶ ನನಗೆ ಲಭಿಸಿದ್ದು ಸಂತಸ ನವ ಉಲ್ಲಾಸ ಹರ್‍ಷ ತಂದಿತ್ತು.

ಮಡಿಕೇರಿ ಸ್ವರ್‍ಗ ಸೀಮೆ, ಕನ್ನಡ ನಾಡಿನ ಕಾಶ್ಮೀರ, ಭೂ ಕೈಲಾಸ, ಮೇಲಿಂದ ಮೇಲೆ ನೆನಪಾಗುವುದು.

ಅಲ್ಲಿನ ಊಟ, ತಿಂಡಿ, ಅದರಲ್ಲೂ “ಕಕ್ಕಡ ಪದಿನೆಟ್ ಪಾಯಸ” ಸುರುಕುಂಬಾವನ್ನು ಮೀರಿಸುವುದು.

ಕಕ್ಕಡ=ಆಟಿ ತಿಂಗಳು-ಕರ್‍ಕಾಟಕ ತಿಂಗಳು- ಆಟಿ ಸೊಪ್ಪು ಎಂದು ಅರ್‍ಥ. ಈ ಮೂರಡಿ ಹಚ್ಚನೆ ಸೊಪ್ಪಿನ ಗಿಡ ಅಲ್ಲಿನ ಕಾಫಿ ತೋಟಗಳಲ್ಲಿ, ಕಾಡುಮೇಡುಗಳಲ್ಲಿ ಹುಲುಸಾಗಿ ಬೆಳೆಯುವುದು. ಇದು ಔಷಧಿ ಪರಿಮಳಯುಕ್ತ ಸಸ್ಯ. ಇದರಲ್ಲಿ ಸರಿಯಾಗಿ ಮೂರು ವಾರ ಜುಲೈನಲ್ಲಿ ದಿನಕ್ಕೊಂದು ಔಷಧಿ ಗುಣ ಈ ಗಿಡದಲ್ಲಿ ಪ್ರಕೃತಿ ದತ್ತವಾಗಿ ಸೇರುವುದೆಂದೂ…. ಆಗಸ್ಟ್ ಮೊದಲ ವಾರದ ಮೊದಲ ದಿನ ಹಬ್ಬದ ದಿನ ಈ ಸೊಪ್ಪು ಘಮ ಘಮಾ ಪರಿವಾಳ ಬೀರುವುದು. ಇದನ್ನು ಕಿತ್ತು, ಸೋಸಿ ತೊಳೆದು, ಇದರಿಂದ ರಸ ತೆಗೆದು, ಪಾಯಸದಲ್ಲಿ ಸೇರಿಸಿ, ತೆಂಗಿನ ತುರಿ, ತುಪ್ಪ, ಜೇನು ಬೆರೆಸಿ, ಸಕ್ಕರೆ ಕಲ್ಲು ಸಕ್ಕರೆ, ಸಿಹಿ ಅಕ್ಕಿ, ಏಲಕ್ಕಿ, ಗಸೆಗಸೆ, ದ್ರಾಕ್ಷಿ, ಗೋಡಂಬಿ, ಪಿಸ್ತ, ಬಾದಾಮಿ ಇತ್ಯಾದಿ ಹಾಕಿ ತಯಾರಿಸಿದ ಪಾಯಸ ಕುಡಿಯಲು ತಿನ್ನಲು ಸೊಗಸಾಗಿರುವುದು.

ಅಂದು- ಮಡಿಕೇರಿಯ ತುಂಬಾ ಹುಗ್ಗಿಯ ಹೊಳೆ ಹರಿಯುವುದು. ಮನೆಮನೆ ಓಣಿ‌ಓಣಿ, ಗಲ್ಲಿಗಲ್ಲಿ, ಬೀದಿಬೀದಿಯೆಲ್ಲ, ಘಮಾಘಮಾ ಹುಗ್ಗಿಯ ಪರಿಮಳ ಬೀರುವುದು. ಮೊದಲೇ ಮಡಿಕೇರಿಯು ಸುವಾಸನೆಯುಕ್ತವಾಗಿರುತ್ತದೆ. ಅಂದು ಇನ್ನೂ ಘಮಿಘಮಿಸುವುದು. ಬರೀ ವಾಸನೆಗೆ ಹೊಟ್ಟೆ ತುಂಬಿ ಮುಖವೆಲ್ಲ ಸಿಹಿಗೆ ಉಜ್ಜಿದಂತಾಗುವುದು!

ಬರೀ ಓದಿದರೆ ಸಾಲದು, ಅದರ ಸವಿಯ ಸವಿದು ತೃಪ್ತಿ ಪಟ್ಟುಕೊಂಡು ಧನ್ಯರಾಗಬೇಕು. ಅದುವೇ ಜೀವನ. ಮಡಿಕೇರಿಯ ವಿಶೇಷವದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...