ಮಡಿಕೇರಿಯ ನೆನಪು

ಮಡಿಕೇರಿಯ ನೆನಪು

೧೯೮೩-೧೯೮೪ರಲ್ಲಿ ಮಡಿಕೇರಿಯಲ್ಲಿ ಪ್ರಥಮ ದರ್‍ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆಯಲ್ಲಿದ್ದೆ. ಮಡಿಕೇರಿ ನನ್ನ ಅನ್ನ ದೇವರು. ಎಲ್ಲಿದ್ದರು ಹೇಗಿದ್ದರು ಎಂತಿದ್ದರೂ ಮಡಿಕೇರಿ ಮೇಲಿಂದ ಮೇಲೆ ಕಣ್ಣ ಮುಂದೆ ಮೆರವಣಿಗೆ ಹೊರಡುವುದು.

ಪ್ರತಿ ಮಳೆಗಾಲದ ದಿನಮಾನಗಳಲ್ಲಿ ಮಡಿಕೇರಿ ಸವಿಸವಿ ನೆನಪು ತರುವುದು. ಇದು ಅಲ್ಲದೆ ೧೯೯೮-೧೯೯೯ರಲ್ಲಿ ಮಡಿಕೇರಿಯಲ್ಲಿ ಇರುವ ಬಂದು ಹೋಗುವ ೨೦೧೧-೨೦೧೨ರಲ್ಲಿ ಮತ್ತೆ ಮಡಿಕೇರಿಗೆ ಹೋಗಿ ಬರುವ ಸುವರ್‍ಣಾವಕಾಶ ನನಗೆ ಲಭಿಸಿದ್ದು ಸಂತಸ ನವ ಉಲ್ಲಾಸ ಹರ್‍ಷ ತಂದಿತ್ತು.

ಮಡಿಕೇರಿ ಸ್ವರ್‍ಗ ಸೀಮೆ, ಕನ್ನಡ ನಾಡಿನ ಕಾಶ್ಮೀರ, ಭೂ ಕೈಲಾಸ, ಮೇಲಿಂದ ಮೇಲೆ ನೆನಪಾಗುವುದು.

ಅಲ್ಲಿನ ಊಟ, ತಿಂಡಿ, ಅದರಲ್ಲೂ “ಕಕ್ಕಡ ಪದಿನೆಟ್ ಪಾಯಸ” ಸುರುಕುಂಬಾವನ್ನು ಮೀರಿಸುವುದು.

ಕಕ್ಕಡ=ಆಟಿ ತಿಂಗಳು-ಕರ್‍ಕಾಟಕ ತಿಂಗಳು- ಆಟಿ ಸೊಪ್ಪು ಎಂದು ಅರ್‍ಥ. ಈ ಮೂರಡಿ ಹಚ್ಚನೆ ಸೊಪ್ಪಿನ ಗಿಡ ಅಲ್ಲಿನ ಕಾಫಿ ತೋಟಗಳಲ್ಲಿ, ಕಾಡುಮೇಡುಗಳಲ್ಲಿ ಹುಲುಸಾಗಿ ಬೆಳೆಯುವುದು. ಇದು ಔಷಧಿ ಪರಿಮಳಯುಕ್ತ ಸಸ್ಯ. ಇದರಲ್ಲಿ ಸರಿಯಾಗಿ ಮೂರು ವಾರ ಜುಲೈನಲ್ಲಿ ದಿನಕ್ಕೊಂದು ಔಷಧಿ ಗುಣ ಈ ಗಿಡದಲ್ಲಿ ಪ್ರಕೃತಿ ದತ್ತವಾಗಿ ಸೇರುವುದೆಂದೂ…. ಆಗಸ್ಟ್ ಮೊದಲ ವಾರದ ಮೊದಲ ದಿನ ಹಬ್ಬದ ದಿನ ಈ ಸೊಪ್ಪು ಘಮ ಘಮಾ ಪರಿವಾಳ ಬೀರುವುದು. ಇದನ್ನು ಕಿತ್ತು, ಸೋಸಿ ತೊಳೆದು, ಇದರಿಂದ ರಸ ತೆಗೆದು, ಪಾಯಸದಲ್ಲಿ ಸೇರಿಸಿ, ತೆಂಗಿನ ತುರಿ, ತುಪ್ಪ, ಜೇನು ಬೆರೆಸಿ, ಸಕ್ಕರೆ ಕಲ್ಲು ಸಕ್ಕರೆ, ಸಿಹಿ ಅಕ್ಕಿ, ಏಲಕ್ಕಿ, ಗಸೆಗಸೆ, ದ್ರಾಕ್ಷಿ, ಗೋಡಂಬಿ, ಪಿಸ್ತ, ಬಾದಾಮಿ ಇತ್ಯಾದಿ ಹಾಕಿ ತಯಾರಿಸಿದ ಪಾಯಸ ಕುಡಿಯಲು ತಿನ್ನಲು ಸೊಗಸಾಗಿರುವುದು.

ಅಂದು- ಮಡಿಕೇರಿಯ ತುಂಬಾ ಹುಗ್ಗಿಯ ಹೊಳೆ ಹರಿಯುವುದು. ಮನೆಮನೆ ಓಣಿ‌ಓಣಿ, ಗಲ್ಲಿಗಲ್ಲಿ, ಬೀದಿಬೀದಿಯೆಲ್ಲ, ಘಮಾಘಮಾ ಹುಗ್ಗಿಯ ಪರಿಮಳ ಬೀರುವುದು. ಮೊದಲೇ ಮಡಿಕೇರಿಯು ಸುವಾಸನೆಯುಕ್ತವಾಗಿರುತ್ತದೆ. ಅಂದು ಇನ್ನೂ ಘಮಿಘಮಿಸುವುದು. ಬರೀ ವಾಸನೆಗೆ ಹೊಟ್ಟೆ ತುಂಬಿ ಮುಖವೆಲ್ಲ ಸಿಹಿಗೆ ಉಜ್ಜಿದಂತಾಗುವುದು!

ಬರೀ ಓದಿದರೆ ಸಾಲದು, ಅದರ ಸವಿಯ ಸವಿದು ತೃಪ್ತಿ ಪಟ್ಟುಕೊಂಡು ಧನ್ಯರಾಗಬೇಕು. ಅದುವೇ ಜೀವನ. ಮಡಿಕೇರಿಯ ವಿಶೇಷವದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀ ವಿದ್ಯಾರಣ್ಯರ ಅಡಿದಾವರೆಯಲ್ಲಿ
Next post ತೊಟ್ಟಿಲಲ್ಲಿ ಹಾಕುವ ಹಾಡು

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

cheap jordans|wholesale air max|wholesale jordans|wholesale jewelry|wholesale jerseys