Home / ಲೇಖನ / ಇತರೆ / ಮಡಿಕೇರಿಯ ನೆನಪು

ಮಡಿಕೇರಿಯ ನೆನಪು

೧೯೮೩-೧೯೮೪ರಲ್ಲಿ ಮಡಿಕೇರಿಯಲ್ಲಿ ಪ್ರಥಮ ದರ್‍ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆಯಲ್ಲಿದ್ದೆ. ಮಡಿಕೇರಿ ನನ್ನ ಅನ್ನ ದೇವರು. ಎಲ್ಲಿದ್ದರು ಹೇಗಿದ್ದರು ಎಂತಿದ್ದರೂ ಮಡಿಕೇರಿ ಮೇಲಿಂದ ಮೇಲೆ ಕಣ್ಣ ಮುಂದೆ ಮೆರವಣಿಗೆ ಹೊರಡುವುದು.

ಪ್ರತಿ ಮಳೆಗಾಲದ ದಿನಮಾನಗಳಲ್ಲಿ ಮಡಿಕೇರಿ ಸವಿಸವಿ ನೆನಪು ತರುವುದು. ಇದು ಅಲ್ಲದೆ ೧೯೯೮-೧೯೯೯ರಲ್ಲಿ ಮಡಿಕೇರಿಯಲ್ಲಿ ಇರುವ ಬಂದು ಹೋಗುವ ೨೦೧೧-೨೦೧೨ರಲ್ಲಿ ಮತ್ತೆ ಮಡಿಕೇರಿಗೆ ಹೋಗಿ ಬರುವ ಸುವರ್‍ಣಾವಕಾಶ ನನಗೆ ಲಭಿಸಿದ್ದು ಸಂತಸ ನವ ಉಲ್ಲಾಸ ಹರ್‍ಷ ತಂದಿತ್ತು.

ಮಡಿಕೇರಿ ಸ್ವರ್‍ಗ ಸೀಮೆ, ಕನ್ನಡ ನಾಡಿನ ಕಾಶ್ಮೀರ, ಭೂ ಕೈಲಾಸ, ಮೇಲಿಂದ ಮೇಲೆ ನೆನಪಾಗುವುದು.

ಅಲ್ಲಿನ ಊಟ, ತಿಂಡಿ, ಅದರಲ್ಲೂ “ಕಕ್ಕಡ ಪದಿನೆಟ್ ಪಾಯಸ” ಸುರುಕುಂಬಾವನ್ನು ಮೀರಿಸುವುದು.

ಕಕ್ಕಡ=ಆಟಿ ತಿಂಗಳು-ಕರ್‍ಕಾಟಕ ತಿಂಗಳು- ಆಟಿ ಸೊಪ್ಪು ಎಂದು ಅರ್‍ಥ. ಈ ಮೂರಡಿ ಹಚ್ಚನೆ ಸೊಪ್ಪಿನ ಗಿಡ ಅಲ್ಲಿನ ಕಾಫಿ ತೋಟಗಳಲ್ಲಿ, ಕಾಡುಮೇಡುಗಳಲ್ಲಿ ಹುಲುಸಾಗಿ ಬೆಳೆಯುವುದು. ಇದು ಔಷಧಿ ಪರಿಮಳಯುಕ್ತ ಸಸ್ಯ. ಇದರಲ್ಲಿ ಸರಿಯಾಗಿ ಮೂರು ವಾರ ಜುಲೈನಲ್ಲಿ ದಿನಕ್ಕೊಂದು ಔಷಧಿ ಗುಣ ಈ ಗಿಡದಲ್ಲಿ ಪ್ರಕೃತಿ ದತ್ತವಾಗಿ ಸೇರುವುದೆಂದೂ…. ಆಗಸ್ಟ್ ಮೊದಲ ವಾರದ ಮೊದಲ ದಿನ ಹಬ್ಬದ ದಿನ ಈ ಸೊಪ್ಪು ಘಮ ಘಮಾ ಪರಿವಾಳ ಬೀರುವುದು. ಇದನ್ನು ಕಿತ್ತು, ಸೋಸಿ ತೊಳೆದು, ಇದರಿಂದ ರಸ ತೆಗೆದು, ಪಾಯಸದಲ್ಲಿ ಸೇರಿಸಿ, ತೆಂಗಿನ ತುರಿ, ತುಪ್ಪ, ಜೇನು ಬೆರೆಸಿ, ಸಕ್ಕರೆ ಕಲ್ಲು ಸಕ್ಕರೆ, ಸಿಹಿ ಅಕ್ಕಿ, ಏಲಕ್ಕಿ, ಗಸೆಗಸೆ, ದ್ರಾಕ್ಷಿ, ಗೋಡಂಬಿ, ಪಿಸ್ತ, ಬಾದಾಮಿ ಇತ್ಯಾದಿ ಹಾಕಿ ತಯಾರಿಸಿದ ಪಾಯಸ ಕುಡಿಯಲು ತಿನ್ನಲು ಸೊಗಸಾಗಿರುವುದು.

ಅಂದು- ಮಡಿಕೇರಿಯ ತುಂಬಾ ಹುಗ್ಗಿಯ ಹೊಳೆ ಹರಿಯುವುದು. ಮನೆಮನೆ ಓಣಿ‌ಓಣಿ, ಗಲ್ಲಿಗಲ್ಲಿ, ಬೀದಿಬೀದಿಯೆಲ್ಲ, ಘಮಾಘಮಾ ಹುಗ್ಗಿಯ ಪರಿಮಳ ಬೀರುವುದು. ಮೊದಲೇ ಮಡಿಕೇರಿಯು ಸುವಾಸನೆಯುಕ್ತವಾಗಿರುತ್ತದೆ. ಅಂದು ಇನ್ನೂ ಘಮಿಘಮಿಸುವುದು. ಬರೀ ವಾಸನೆಗೆ ಹೊಟ್ಟೆ ತುಂಬಿ ಮುಖವೆಲ್ಲ ಸಿಹಿಗೆ ಉಜ್ಜಿದಂತಾಗುವುದು!

ಬರೀ ಓದಿದರೆ ಸಾಲದು, ಅದರ ಸವಿಯ ಸವಿದು ತೃಪ್ತಿ ಪಟ್ಟುಕೊಂಡು ಧನ್ಯರಾಗಬೇಕು. ಅದುವೇ ಜೀವನ. ಮಡಿಕೇರಿಯ ವಿಶೇಷವದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...