Home / ಲೇಖನ / ಇತರೆ / ಇದು ಸಿನಿಮಾ ಅಲ್ಲ

ಇದು ಸಿನಿಮಾ ಅಲ್ಲ

ನೀವೆಲ್ಲ ಜುಲೈ ೨೦೧೫ರಲ್ಲಿ ನಟ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯಿಸಿರುವ ‘ಭಜರಂಗಿ ಭಾಯಿಜಾನ್’ ಚಲನಚಿತ್ರವನ್ನು ನೋಡಿ ಐದಾರು ಸಾರು ಕಣ್ಣೀರು ಸುರಿಸಿರಬಹುದು!

ಭವ್ಯ ಭಾರತದಲ್ಲಿ ಕಳೆದು ಹೋಗುವ ಪಾಕ್‌ನ ಹರ್‍ಷಾಲಿ ಮುನ್ನಿ ಮೂಕ ಬಾಲಕಿಯನ್ನು ನಾಯಕ ಪಾಸ್‌ಪೋರ್ಟ್ ಗೊಡವೆ ಇಲ್ಲದೇ ಸಾಹಸದ ಮೂಲಕವಾಗಿ ಪಾಕಿಸ್ತಾನಕ್ಕೆ ಬಿಟ್ಟು ಬರುವ ಸಾಹಸಮಯದ ಕಥೆ ವ್ಯಥೆ ತೆರೆಯ ಮೇಲೆ ನೋಡಿ ಮನಃ ಕರಗಿ ಹಲ್ಲಿ ಲೋಚಗುಟ್ಟಿದಂತೆ ಎಲ್ಲರೂ ಲೊಚಗುಟ್ಟುವವರೇ….

ಆದರೆ ಪಾಕಿಸ್ಥಾನದಲ್ಲಿ ಸಿಲುಕಿರುವ ಮೂಕ ಬಾಲಕಿಗೆ ತನ್ನ ತವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಈಕೆ ಪಾಕ್‌ನ ಸೇವಾ-ಸಂಸ್ಥೆಯೊಂದರಲ್ಲಿದ್ದಾಳೆ! ಇದು ಕರಾಚಿಯ ‘ಈದಿ ಚಾರಿಟಿ’ಯ ಮುಖ್ಯಸ್ಥ ‘ಬಿಲ್ಕೀ ಈದಿ’ ಈಕೆಗೆ ಪ್ರೀತಿಯಿಂದ ‘ಗೀತಾ’ ಎಂದು ಕರೆಯುತ್ತಿರುವರು.

ಕಳೆದ ೧೫ ವರ್ಷಗಳಿಂದ ಪಾಕಿಸ್ತಾನದಲ್ಲೇ ಇರುವ ೨೨ ಹರೆಯದ ಗೀತಾಳಿಗೆ ಮಾತು ಬಾರದ ಕಾರಣ ತನ್ನ ಹೆಸರನ್ನಾಗಲಿ ವಿಳಾಸವನ್ನಾಗಲಿ ಇತರೆ ಯಾವುದೇ ಮಾಹಿತಿ ನೀಡಿರುವುದಿಲ್ಲ!

ಆದರೆ ೨೦೧೨ರಲ್ಲಿ ಈಕೆಯನ್ನು ಭವ್ಯ ಭಾರತಕ್ಕೆ ತಲುಪಿಸುವ ಸಲುವಾಗಿ ಬಿಲ್ಕಿ ಈದಿ ಭವ್ಯಭಾರತಕ್ಕೆ ಬಂದು ಈಕೆಯ ಫೋಟೊ ಸಿಕ್ಕಿದ ಸ್ಥಳ ಇತ್ಯಾದಿ ವಿವರಗಳನ್ನು ಪೊಲೀಸ್ಸಿನವರಿಗೆ ತಲುಪಿಸಿ ಬಂದಿದ್ದರು. ಆದರೂ ಈ ಕೆಲಸ ಇನ್ನೂ ಆಗಿಲ್ಲ.

ಈಗ್ಗೆ ೧೫ ವರ್ಷಗಳ ಹಿಂದೆ ರೈಲಿನಲ್ಲಿ ಲಾಹೋರ್‌ಗೆ ಬಂದಿದ್ದ ಈಕೆಯನ್ನು ಪೊಲೀಸ್ಸಿನವರು ವಶಕ್ಕೆ ಪಡೆದಿದ್ದರು. ಮೂಕಿಯಾಗಿದ್ದರಿಂದ ಬಾಲ ಮಂದಿರಕ್ಕೆ ಸೇರಿಸಿದ್ದರು. ಅಲ್ಲಿ ಈಕೆ ಬಹಳ ಸಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರಿಂದ ಈದಿ ಚಾರಿಟಿಗೆ ಸೇರಿಸಿದ್ದರು. ಅಲ್ಲಿ ಹೊಂದಿಕೊಳ್ಳದ ಕಾರಣ ಬಿಲ್ಕೀ ಈದಿಯವರು ತಮ್ಮ ಮನೆಯಲ್ಲಿ ಈ ಹುಡುಗಿನ ಸಾಕುತ್ತಿರುವರು!

“ಈಕೆ ಹಿಂದಿಲಿ ಏನೇನೋ ಬರೆದು ತೋರಿಸುವಳು ಇಲ್ಲಿನವರಿಗೆ ಅರ್‍ಥವಾಗುತ್ತಿಲ್ಲ. ಕೈಸನ್ನೆ ಬಾಯಿ ಸನ್ನೆಯಲ್ಲಿ ಭಾರತಕ್ಕೆ ಹೋಗಬೇಕೆಂದು ಕಣ್ಣೀರಿಡುತ್ತಾಳೆ! ಇವಳ ವೇಷಭೂಷಣ ಸಂಪ್ರದಾಯವನ್ನು ಗಮನಿಸಿದರೆ ಪಂಜಾಬಿನ ಹಳ್ಳಿ ಹುಡುಗಿಯಿರಬೇಕೆಂದು ಅನಿಸುವುದು ಹಿಂದೂ ದೇವರುಗಳ ಜತೆಯಲ್ಲಿ ಅಲ್ಲಾನನ್ನೂ ಪ್ರಾರ್‍ಥಿಸುವಳು. ಭಾರತಕ್ಕೆ ಮರಳಬೇಕೆಂಬ ಬಲವಾದ ಕೋರಿಕೆ ಎಂದಿಗೆ ಈಡೇರುವುದೋ…” ಎಂದು ಬಿಲ್ಕೀ ಈದಿಯವರು ತಮ್ಮ ಅಳಲನ್ನು ಇತ್ತೀಚೆಗೆ ಸುದ್ದಿ ಮಾಧ್ಯಮದವರ ಮುಂದೆ ತೋಡಿಕೊಂಡಿದ್ದಾರೆ!

ಹಳ್ಳಿ-ತಾಲ್ಲೂಕು-ಜಿಲ್ಲೆ-ರಾಜ್ಯ-ದೇಶ-ವಿದೇಶದ ಗಡಿಭದ್ರತೆಯ ಮುಂದೆ ಸಂಪರ್‍ಕ ಜಾಲತಾಣ ಕೆಲಸ ಮಾಡುವುದು ಎಷ್ಟೊಂದು ಕಷ್ಟವೆಂದು ನಿಜ ಜೀವನದ ಸಿನಿಮಾದಿಂದ ವ್ಯಕ್ತವಾಗುವುದು.

ಬಹುಶಃ ಪುಟ್ಟ ಬಾಲೆಯನ್ನು ಕಳೆದುಕೊಂಡವರು ಇನ್ನು ನಮ್ಮ ಮಗಳು ಸಿಗಲಾರಳು! ಎಂದು ಕೈಚೆಲ್ಲಿ ಮರೆತಿರಬಹುದೆಂದು ಮೇಲುನೋಟಕ್ಕೆ ಕಂಡುಬರುವುದು. ಈ ಘಟನೆ ಸುಖಾಂತ ಕಾಣಬಹುದೆಂದು ಎದುರು ನೋಡುವ…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...