Home / ಲೇಖನ / ಕೃಷಿ / ಬಡವರ ನವಣೆ

ಬಡವರ ನವಣೆ

೧೯೬೩-೧೯೬೪ರಲ್ಲಿ ನಮ್ಮಪ್ಪನ ಹಿಂದಿಂದೆ… ಎರೆಹೊಲ, ಕೆನ್ನೊಲ, ಕಣಗಳಿಗೆ ಸುತ್ತುತ್ತಿದ್ದೆ.

ನೂರಾರು ಎಕರೆ ಬರೀ ನವಣೆಯನ್ನೇ ಬೆಳೆಯುತ್ತಿದ್ದರು. ನೂರಾರು ರೈತರು ಕೂಡಾ ಕಡ್ಡಾಯವಾಗಿ ನೂರಾರು ಚೀಲದಿಂದ ಹಿಡಿದು ಕನಿಷ್ಠ ಹತ್ತು ಚೀಲಗಳಾದರೂ ನವಣೆ ಬೆಳೆದು ಖುಷಿಪಡುತ್ತಿದ್ದರು.

ಕೆಲವರಂತೂ ಪ್ರತಿ ವರ್‍ಷ ನವಣೆ ಬೆಳೆದು ಅವುಗಳನ್ನು ಬಂಡಿಗಳ ಮೇಲೆ ಮೆರವಣಿಗೆ ಮಾಡುತ್ತಾ ತಾಳಮೇಳ ಭಾಜಭಜಂತ್ರಿಯಲ್ಲಿ ಮನೆದುಂಬಿಸಿಕೊಳ್ಳುತ್ತಿದ್ದರಲ್ಲದೆ ಆವತ್ತು ಇಡೀ ಊರು ಕೇರಿಗೆಲ್ಲ ನವಣೆಬಾನ- ಹುರುಳಿಕಟ್ಟು, ಮಜ್ಜಿಗೆ ನವಣೆ ಅನ್ನ… ನೀಡಿ ಸಂಭ್ರಮಿಸುತ್ತಿದ್ದರು!

ನವಣೆ ಬೆಳೆ-ತೆನೆ-ನವಣೆ-ನವಣೆ ಅಕ್ಕಿ ಎಲ್ಲ… ಬಂಗಾರದ ಬಣ್ಣ… ಅದರ ಹೊಳಪು, ಘಮಾ ಘಮಾ.. ಹಬ್ಬ ಹರಿದಿನಗಳಲ್ಲಿ ನವಣೆ ಅನ್ನ ಇದ್ದರೆ ಹಬ್ಬ ಮುಗಿದಂತೇ…

ಒಮ್ಮೆ ನವಣೆ ಹೊಲದಲ್ಲಿ ನಿಂತು ಹರ್‍ಷದ ಹೊನಲು ಹರಿಸಿ ನಾನು ನನ್ನಪ್ಪನ ಕೇಳಿಯೇ ಬಿಟ್ಟೆ ‘ಅಪ್ಪ ನೂರಾರು ಜನರು ನೂರಾರು ಎಕರೆಯಲ್ಲಿ ಬರೀ ಎರೆಹೊಲದಲ್ಲಿ ನೀರು ಗೊಬ್ಬರವಿಲ್ಲದೆ ನವಣೆ ಬೆಳೆಯುವ ಗುಟ್ಟಾದರೂ ಏನು?’ ಅಂತಾ ಅಂದೆ.

‘ನವಣೆ ಗಟ್ಟಿ, ಆಯುಷ್ಯ ವೃದ್ಧಿ, ಮಳೆಯಿಲ್ಲದೆ ಗೊಬ್ಬರವಿಲ್ಲದೆ ಮೂರು ತಿಂಗಳಲ್ಲಿ ಸಮೃದ್ಧಿ ಬೆಳೆ. ನಮ್ಮಪ್ಪ ಬಬ್ಲೆಪ್ಪ, ತಾತ ದೊಡ್ಡೆಲ್ಲಪ್ಪ, ಮುತ್ತಾತ ನಡುವಲ ಯಲ್ಲಪ್ಪ ಇವರೆಲ್ಲ ನವಣೆ ಬೆಳೆದು ನಳನಳಸಿ ಬೆಳೆದಿದ್ದರು ಗಟ್ಟಿ ಮುಟ್ಟಾಗಿದ್ದರು.’ ಎಂದ ಅಪ್ಪ.

‘ಅಪ್ಪ ಇದರಲ್ಲಿ ಏನಿದೆ? ಅಂಥಾದೇನಿದೆ?’ ಎಂದೆ.

ಅಪ್ಪ ಮಾತುಗಾರ.

‘ಇದರಲ್ಲಿ ಏನಿಲ್ಲ ಎಂದು ನನ್ನ ಕೇಳು… ಮೂಳೆ ಬೆಳೆಯಲು ಗಟ್ಟಿಗೊಳ್ಳಲು ಇದರಲ್ಲಿ ಕ್ಯಾಲ್ಸಿಯಂ ಔಷಧಿ ಇದೆ. ಮಲಬದ್ಧತೆಗೆ ಮೂಲ ವ್ಯಾಧಿಗೆ ನಾರಿನಾಂಶವಿದೆ. ಶಕ್ತಿವರ್‍ಧಕವಾಗಿ ಪ್ರೋಟಿನ್ ಅಂಶವಿದೆ. ಜೀರ್‍ಣಶಕ್ತಿಗೆ ಕಾರ್‍ಬೋಹೈಡ್ರೇಟ್ ಅಂಶವಿದೆ. ಕೊಬ್ಬಿನಾಂಶ ಕಡಿಮೆ ಇದೆ. ಸಕ್ಕರೆ ಕಾಯಿಲೆಗೆ ರಾಮಬಾಣ. ಇದು ಮಕ್ಕಳಿಗೆ ವೃದ್ಧರಿಗೆ ಬಾಣಂತಿಯರಿಗೆ ಕಾಯಿಲೆವುಳ್ಳವರಿಗೆ ಸರ್‍ವೋತೋಮುಖ ಆಹಾರ. ಕ್ಯಾನ್ಸರ್ ನೀಗಿಸುವ ಗುಣ ಹೊಂದಿದೆ. ನವಣೆಯಿಂದ ಅನ್ನ-ಗಂಜಿ-ಮುದ್ದೆ-ರೊಟ್ಟಿ, ದೋಸೆ-ಹಪ್ಪಳ, ಸಂಡಿಗೆ, ಸಿಹಿತಿಂಡಿಗಳು ಖಾರದ ತಿಂಡಿ ತಿನಿಸುಗಳನ್ನು ಮಾಡಿ, ತಿನ್ನಬಹುದು. ಮೂರು ಹೊತ್ತು ತಿಂದರೆ ಅಡ್ಡ ಪರಿಣಾಮವಿಲ್ಲ! ಬದಲಿಗೆ ರೋಗ ನಿರೋಧಕ ಶಕ್ತಿ ವೃದ್ಧಿಗೊಳ್ಳುವುದೆಂದು ಅಪ್ಪ ವಿವರಿಸಿ ಹೇಳಿದ.

ಇದು ಬರೀ ಬಡವರ ನವಣೆಯಲ್ಲ. ಸರ್‍ವಜನರ ಸರ್‍ವೋತೋಮುಖ ಆಹಾರ.

ಇದನ್ನು ಮಕ್ಕಳೆಲ್ಲ ತಿಂದು, ಆರೋಗ್ಯವಂತರಾಗುವಿರಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...