Home / ಲೇಖನ / ಕೃಷಿ / ಬಡವರ ನವಣೆ

ಬಡವರ ನವಣೆ

೧೯೬೩-೧೯೬೪ರಲ್ಲಿ ನಮ್ಮಪ್ಪನ ಹಿಂದಿಂದೆ… ಎರೆಹೊಲ, ಕೆನ್ನೊಲ, ಕಣಗಳಿಗೆ ಸುತ್ತುತ್ತಿದ್ದೆ.

ನೂರಾರು ಎಕರೆ ಬರೀ ನವಣೆಯನ್ನೇ ಬೆಳೆಯುತ್ತಿದ್ದರು. ನೂರಾರು ರೈತರು ಕೂಡಾ ಕಡ್ಡಾಯವಾಗಿ ನೂರಾರು ಚೀಲದಿಂದ ಹಿಡಿದು ಕನಿಷ್ಠ ಹತ್ತು ಚೀಲಗಳಾದರೂ ನವಣೆ ಬೆಳೆದು ಖುಷಿಪಡುತ್ತಿದ್ದರು.

ಕೆಲವರಂತೂ ಪ್ರತಿ ವರ್‍ಷ ನವಣೆ ಬೆಳೆದು ಅವುಗಳನ್ನು ಬಂಡಿಗಳ ಮೇಲೆ ಮೆರವಣಿಗೆ ಮಾಡುತ್ತಾ ತಾಳಮೇಳ ಭಾಜಭಜಂತ್ರಿಯಲ್ಲಿ ಮನೆದುಂಬಿಸಿಕೊಳ್ಳುತ್ತಿದ್ದರಲ್ಲದೆ ಆವತ್ತು ಇಡೀ ಊರು ಕೇರಿಗೆಲ್ಲ ನವಣೆಬಾನ- ಹುರುಳಿಕಟ್ಟು, ಮಜ್ಜಿಗೆ ನವಣೆ ಅನ್ನ… ನೀಡಿ ಸಂಭ್ರಮಿಸುತ್ತಿದ್ದರು!

ನವಣೆ ಬೆಳೆ-ತೆನೆ-ನವಣೆ-ನವಣೆ ಅಕ್ಕಿ ಎಲ್ಲ… ಬಂಗಾರದ ಬಣ್ಣ… ಅದರ ಹೊಳಪು, ಘಮಾ ಘಮಾ.. ಹಬ್ಬ ಹರಿದಿನಗಳಲ್ಲಿ ನವಣೆ ಅನ್ನ ಇದ್ದರೆ ಹಬ್ಬ ಮುಗಿದಂತೇ…

ಒಮ್ಮೆ ನವಣೆ ಹೊಲದಲ್ಲಿ ನಿಂತು ಹರ್‍ಷದ ಹೊನಲು ಹರಿಸಿ ನಾನು ನನ್ನಪ್ಪನ ಕೇಳಿಯೇ ಬಿಟ್ಟೆ ‘ಅಪ್ಪ ನೂರಾರು ಜನರು ನೂರಾರು ಎಕರೆಯಲ್ಲಿ ಬರೀ ಎರೆಹೊಲದಲ್ಲಿ ನೀರು ಗೊಬ್ಬರವಿಲ್ಲದೆ ನವಣೆ ಬೆಳೆಯುವ ಗುಟ್ಟಾದರೂ ಏನು?’ ಅಂತಾ ಅಂದೆ.

‘ನವಣೆ ಗಟ್ಟಿ, ಆಯುಷ್ಯ ವೃದ್ಧಿ, ಮಳೆಯಿಲ್ಲದೆ ಗೊಬ್ಬರವಿಲ್ಲದೆ ಮೂರು ತಿಂಗಳಲ್ಲಿ ಸಮೃದ್ಧಿ ಬೆಳೆ. ನಮ್ಮಪ್ಪ ಬಬ್ಲೆಪ್ಪ, ತಾತ ದೊಡ್ಡೆಲ್ಲಪ್ಪ, ಮುತ್ತಾತ ನಡುವಲ ಯಲ್ಲಪ್ಪ ಇವರೆಲ್ಲ ನವಣೆ ಬೆಳೆದು ನಳನಳಸಿ ಬೆಳೆದಿದ್ದರು ಗಟ್ಟಿ ಮುಟ್ಟಾಗಿದ್ದರು.’ ಎಂದ ಅಪ್ಪ.

‘ಅಪ್ಪ ಇದರಲ್ಲಿ ಏನಿದೆ? ಅಂಥಾದೇನಿದೆ?’ ಎಂದೆ.

ಅಪ್ಪ ಮಾತುಗಾರ.

‘ಇದರಲ್ಲಿ ಏನಿಲ್ಲ ಎಂದು ನನ್ನ ಕೇಳು… ಮೂಳೆ ಬೆಳೆಯಲು ಗಟ್ಟಿಗೊಳ್ಳಲು ಇದರಲ್ಲಿ ಕ್ಯಾಲ್ಸಿಯಂ ಔಷಧಿ ಇದೆ. ಮಲಬದ್ಧತೆಗೆ ಮೂಲ ವ್ಯಾಧಿಗೆ ನಾರಿನಾಂಶವಿದೆ. ಶಕ್ತಿವರ್‍ಧಕವಾಗಿ ಪ್ರೋಟಿನ್ ಅಂಶವಿದೆ. ಜೀರ್‍ಣಶಕ್ತಿಗೆ ಕಾರ್‍ಬೋಹೈಡ್ರೇಟ್ ಅಂಶವಿದೆ. ಕೊಬ್ಬಿನಾಂಶ ಕಡಿಮೆ ಇದೆ. ಸಕ್ಕರೆ ಕಾಯಿಲೆಗೆ ರಾಮಬಾಣ. ಇದು ಮಕ್ಕಳಿಗೆ ವೃದ್ಧರಿಗೆ ಬಾಣಂತಿಯರಿಗೆ ಕಾಯಿಲೆವುಳ್ಳವರಿಗೆ ಸರ್‍ವೋತೋಮುಖ ಆಹಾರ. ಕ್ಯಾನ್ಸರ್ ನೀಗಿಸುವ ಗುಣ ಹೊಂದಿದೆ. ನವಣೆಯಿಂದ ಅನ್ನ-ಗಂಜಿ-ಮುದ್ದೆ-ರೊಟ್ಟಿ, ದೋಸೆ-ಹಪ್ಪಳ, ಸಂಡಿಗೆ, ಸಿಹಿತಿಂಡಿಗಳು ಖಾರದ ತಿಂಡಿ ತಿನಿಸುಗಳನ್ನು ಮಾಡಿ, ತಿನ್ನಬಹುದು. ಮೂರು ಹೊತ್ತು ತಿಂದರೆ ಅಡ್ಡ ಪರಿಣಾಮವಿಲ್ಲ! ಬದಲಿಗೆ ರೋಗ ನಿರೋಧಕ ಶಕ್ತಿ ವೃದ್ಧಿಗೊಳ್ಳುವುದೆಂದು ಅಪ್ಪ ವಿವರಿಸಿ ಹೇಳಿದ.

ಇದು ಬರೀ ಬಡವರ ನವಣೆಯಲ್ಲ. ಸರ್‍ವಜನರ ಸರ್‍ವೋತೋಮುಖ ಆಹಾರ.

ಇದನ್ನು ಮಕ್ಕಳೆಲ್ಲ ತಿಂದು, ಆರೋಗ್ಯವಂತರಾಗುವಿರಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...