Home / ಲೇಖನ / ಇತರೆ / ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...