Home / ಲೇಖನ / ಇತರೆ / ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...