ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನೊಲುಮೆ
Next post ದಾರಿ ಬಿಡಿ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys