Home / ಲೇಖನ / ಇತರೆ / ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ನಿಮ್ಮೊಡನಿದ್ದೂ ನಿಮ್ಮಂತಾಗದೇ ?

ಪ್ರಿಯ ಸಖಿ,
ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು.

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೇ ಬೇರೂತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲುಕಷ್ಟದ ಕೆಲಸ.

ಹೌದಲ್ಲವೇ ಸಖೀ, ವ್ಯಕ್ತಿತ್ವಗಳಿಗೆ ಪ್ರಲೋಭನೆಗಳನ್ನೊಡ್ಡುವವು ಸಮಾಜ, ಧರ್ಮ, ಸರ್ಕಾರ, ಸಿದ್ಧಾಂತಗಳು, ತರ್ಕಗಳು ……… ಇತ್ಯಾದಿ ಹಲವಾರು.  ಅವುಗಳಿಲ್ಲದಿದ್ದರೆ ಬದುಕು ಸಾಗದಿದ್ದರೂ, ಅವುಗಳ ಜೊತೆಯೇ ಬದುಕಬೇಕಿರುವುದು ಅನಿವಾರ್ಯವಾದರೂ ಅವುಗಳೆಲ್ಲದರ ಹಿಡಿತದಿಂದ ಬಿಡಿಸಿಕೊಂಡು ತಮ್ಮದೇ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಎಷ್ಟು ಕಷ್ಟದ ಕೆಲಸ ಅಲ್ಲವೇ?  ಆದರೆ ಅಸಾಧ್ಯವೇನಲ್ಲ!

ಆಂಗ್ಲ ಕವಿ ಬ್ರೌನಿಂಗ್ ಹೀಗೆ ಹೇಳುತ್ತಾನೆ “Best be yourself, imperial. Plain and true’ ನಿನಗೆ ನೀನಾಗಿರುವುದು ನೀನೇ ಸಾರ್ವಭೌಮನಾಗಿರುವುದು, ನಿನಗೆ ನೀನು ಸತ್ಯವಾಗಿರುವುದು, ನಿಷ್ಕಪಟವಾಗಿರುವುದು ಉತ್ತಮವಾದುದು
ಎಂದು.  ಹಾಗಾದಾಗ ಯಾವ ಪ್ರಲೋಭನೆಗೆ ಏಕೆ ಮಣಿಯಬೇಕು?

ತಾವರೆಯ ಎಲೆಗೆ ನೀರಿನಲ್ಲಿರುವುದು ಅನಿವಾರ್ಯ. ಆದರೆ ಬೇರುಗಳು, ಎಲ್ಲಾ ಸಾರ ಇರುವುದೂ ನೀರಿನಲ್ಲೇ, ಆದರೆ ಸಾರ ಹೀರಿಯೇ ಬೆಳೆದರೂ ತಾವರೆಯ ಎಲೆ
ತನ್ನದೇ ಸಮರ್ಥ, ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಬೆಳೆದು ತನ್ನ ಮೇಲೆ ಬಿದ್ದ ನೀರಹನಿಯ ಒತ್ತಡಕ್ಕೆ ಮಣಿಯದೇ ಅಂದರೆ ಒದ್ದೆಯೂ ಆಗದೇ, ಮುಳುಗಿಯೂ ಹೋಗದೆ ‘ಇದ್ದೂ ಇಲ್ಲದಂತೆ’ ಇದ್ದರೂ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ನಾವಾಗಬೇಕು. ಎಲ್ಲ ಪ್ರಲೋಭನೆಗಳಿಗೆ ಒಡ್ಡಿಕೊಂಡರೂ, ಅದರ ಸಾರವಷ್ಟೇ ಹೀರಿ ಇದರಲ್ಲೇ (ವ್ಯವಸ್ಥೆಯಲ್ಲೇ) ಇದ್ದೂ, ಇದರಲ್ಲೇ ಬೆಳೆದು, ನಮ್ಮೆದೇ ಪ್ರತ್ಯೇಕ ವ್ಯಕ್ತಿತ್ವ ರೂಪಿಸಿಕೊಳ್ಳುವುದು ನಿಜಕ್ಕೂ ಒಂದು ಚಾಲೆಂಜ್ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...