Home / ಲೇಖನ / ಇತರೆ / ಬಂಡಾಯ

ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...