ಬಂಡಾಯ

ಪ್ರಿಯ ಸಖಿ,
ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವಿ ಗೋಪಾಲಕೃಷ್ಣ ಅಡಿಗರು ‘ಬಂಡಾಯ’ ಎಂಬ ತಮ್ಮ ಕವನದಲ್ಲಿ ಹೀಗೆ ಹೇಳುತ್ತಾರೆ.

ದಂಗೆಯೇಳುತ್ತಲೇ ಇರಬೇಕಾಗುತ್ತದೆ
ಇಲ್ಲಿ ಪ್ರತಿಯೊಬ್ಬನೂ ತನ್ನ ತನ್ನ
ಚಿನ್ನದ್ದೋ, ರನ್ನದ್ದೋ, ಕಬ್ಬಿಣದ್ದೋ, ಮರದ್ದೋ
ಅಥವಾ ಬರಿ ಮಣ್ಣಿನದೋ ಸಿಂಹಾಸನವ
ಹುಡುಕಿ ತೆಗೆದು ಗುರುತಿಸಿ ಅಲ್ಲಿ
ಆಸನಾರೂಢನಾಗುವವರೆಗೆ

ವ್ಯಕ್ತಿಯೊಬ್ಬ ತನ್ನ ದಾರಿಯನ್ನ ಕಂಡುಕೊಂಡ ನಂತರ ಗುರಿಸೇರುವ ತನಕ, ಹಾದಿಯಲ್ಲಿ ಎದುರಾಗುವ ಎಲ್ಲ ಅಡ್ಡಿ ಆತಂಕಗಳನ್ನು ಎದುರಿಸಿ ನಿಲ್ಲಬೇಕು. ಎಷ್ಟೋ ಬಾರಿ ವ್ಯವಸ್ಥೆಯೆದುರು ದಂಗೆಯೇಳಬೇಕು. ಎಲ್ಲಿಯವರೆಗೂ ಈ ಹೋರಾಟ ಎನ್ನುವುದನ್ನು ಹೇಳುತ್ತಾ ಕವಿ.

ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ
ತನ್ನ ವ್ಯಕ್ತಿತ್ವಕೆ ಚಹರೆಯ ಪಟ್ಟಿ ಸಿದ್ಧವಾಗುವವರೆಗೆ
ತನ್ನ ಪರಿಮಿತಿಯೊಳಗೆ ಶಾಖೋಪಶಾಖೆಗಳು
ಹುಟ್ಟಿ ಹಬ್ಬುವವರೆಗೆ

ಎನ್ನುತ್ತಾರೆ. ಈ ರೀತಿಯ ಹೋರಾಟದಿಂದಲೇ ವ್ಯಕ್ತಿಯೊಬ್ಬ ಗಟ್ಟಿಯಾಗುತ್ತಾ ಹೋಗುತ್ತಾನೆ. ತನ್ನ ಪರಿಮಿತಿಯನ್ನು ಕಂಡುಕೊಳ್ಳುತ್ತಲೇ ಅದನ್ನು ಮೀರಲು
ಯತ್ನಿಸುತ್ತಾನೆ. ಹೊರಗಿನ ವ್ಯವಸ್ಥೆಗೆದುರಾಗಿ ಹೀಗೆ ಬಂಡಾಯವೇಳುವುದು ಸುಲಭವಾದರೆ ಮನದೊಳಗಿನ ವೈರಿಗಳ ವಿರುದ್ಧ ದಂಗೆಯೇಳುವುದು ತುಂಬಾ ಕಷ್ಟ! ಹೀಗೆ ಮನದೊಂದಿಗೆ ಹೋರಾಡಿ ಗೆದ್ದವನು ವಿಶಿಷ್ಟ ವ್ಯಕ್ತಿತ್ವದವನಾಗುತ್ತಾನೆ. ಸಮಾಜಕ್ಕೇ ಮಾನವತೆಯ ಸಂಕೇತವಾಗುತ್ತಾನೆ ಎನ್ನುತ್ತಾರೆ ಕವಿ.
ಕವನವಮ್ನ ಮುಂದುವರೆಸುತ್ತಾ,

ಬಂಡಾಯದ ಘೋಷ ಮೊಳಗುತ್ತಲೇ ಇರಬೇಕು.
ಗೊಂಚಲು ಗೊಂಚಲಾಗಿ ಸಿಹಿಸಿಹಿ ಹಣ್ಣು
ಪಕ್ವವಾಗುವವರೆಗೆ; ತಿರುಳ ಸಿಹಿ ಅನ್ಯರಿಗೆ
ಬಿತ್ತು ಭವಿಷ್ಯಕ್ಕೆ; ಮಾನವತ್ವದ ಬುನಾದಿಗಿನ್ನೊಂದು ಕಲ್ಲು
…………………………..

ಎನ್ನುತ್ತಾರೆ. ಮನದ ವಿಕಾರಗಳನ್ನೆಲ್ಲಾ ಗೆಲ್ಲುವುದು ಸುಲಭ ಸಾಧ್ಯವಲ್ಲವಾದರೂ ಆ ವಿಕಾರಗಳ ವಿರುದ್ಧ ದಂಗೆಯೇಳುತ್ತಲೇ ಇರಬೇಕು. ಯಾರಿಗೆ ಗೊತ್ತು ನಾಳೆಗೆ ಗೆಲುವೂ ಸಿಕ್ಕಬಹುದಲ್ಲವೇ ಸಖಿ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿಂತೆಗೆ ಕಣ್ಣತೆತ್ತವಳೆ!!
Next post ಎಲ್ಲಿ ಮಾಯವಾದ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys