Home / ಲೇಖನ / ಇತರೆ / ಮನಕೆ ಕನ್ನಡಿಯಾದರೆ……

ಮನಕೆ ಕನ್ನಡಿಯಾದರೆ……

ಪ್ರಿಯ ಸಖಿ,
ಪರಿಪೂರ್ಣ ಕವಿತೆಯೊಂದರ ನಿಜವಾದ ಸಾರ್ಥಕತೆ ಇರುವುದೆಲ್ಲಿ? ವಿಮರ್ಶಕನ ಟೀಕೆಯಲ್ಲೋ? ಸಹೃದಯನ ಮೆಚ್ಚುಗೆಯಲ್ಲೋ? ಕವಿಯ ಆತ್ಮ
ಸಂತೃಪ್ತಿಯಲ್ಲೋ?  ಎಲ್ಲಾ ಒಂದಕ್ಕಿಂತಾ ಒಂದು ಮಹತ್ವವಾದದ್ದೇ ! ಉತ್ತಮ ಕವನವೊಂದಕ್ಕೆ ವಿಮರ್ಶಕನ ಟೀಕೆಯೂ ಬೇಕು ಸಹೃದಯನ ಮೆಚ್ಚುಗೆಯೂ ಬೇಕು. ಕವಿ ಮನಕ್ಕೆ ಸಂತೃಪ್ತಿಯನ್ನೂ ನೀಡಬೇಕು. ಆದರೆ ಕವಿ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರು ಏನನ್ನುತ್ತಾರೆ ಗೊತ್ತೆ ?

ನನ್ನ ಹಾಡಿಗೆ ನಲಿವ ಜನರೇ
ನೀವೆ ನನ್ನ ಗುರಿ
ನಿಮ್ಮ ಚಿತ್ತವ ಕದಿಯುವ
ಮಾತೆ ನನ್ನ ಸಿರಿ
ಇದನು ಒಲ್ಲದ ಕೀಳು ಟೀಕೆಯ
ಪರಿವೆ ನನಗಿಲ್ಲ
ಮನಕೆ ಕನ್ನಡಿಯಾದರೆ
ನನಗೆ ಅದೆ ಎಲ್ಲಾ!

ಇಲ್ಲಿ ಕವಿ ಸಹೃದಯನ ಮೆಚ್ಚುಗೆಗೇ ಪ್ರಥಮ ಸ್ಥಾನ ನೀಡುತ್ತಾರೆ! ವಿಮರ್ಶಕನ ಮಾನದಂಡ ಹೇಗೂ ಇರಬಹುದು, ಅವನು ಕವನ ಹುಟ್ಟುವಾಗ ಇಲ್ಲದಿದ್ದ ಯಾವುದೋ ಸಿದ್ಧಾಂತ, ತರ್ಕಗಳ ಆಧಾರವನ್ನು ಇರಿಸಿ ಕವನವನ್ನು ಮೌಲ್ಯಮಾಪನ ಮಾಡುತ್ತಾನೆ.  ಆ ಚೌಕಟ್ಟಿಗೆ ಕವನ ಹೊಂದಿಕೊಳ್ಳದಿದ್ದಾಗ ನಿಜವಾದ ವಿಮರ್ಶೆ ಬರದೇ ಹೋಗಬಹುದು. ಆದರೆ ಸಹೃದಯ ಹಾಗಲ್ಲ. ಅವನಿಗೆ ರಸಾನುಭೂತಿಯೊಂದೇ ಉದ್ದೇಶ. ಅವನು ತನಗೆ ಸಂತೋಷ ಕೊಡುವ ಯಾವ ಕವನವನ್ನೇ ಆದರೂ ಮನಃಪೂರ್ತಿ ಆಸ್ವಾದಿಸುತ್ತಾನೆ. ಅವನ ಹತ್ತಿರ ತಕ್ಕಡಿಯಿಲ್ಲ! ಮನಸ್ಸಿದೆ! ಆದರೆ ಇದಕ್ಕೂ ಮುಖ್ಯವಾದುದು ಕವಿಯ ಆತ್ಮತೃಪ್ತಿ. ಕವನ ಹೊರಹೊಮ್ಮುವುದು ಲೆಕ್ಕಾಚಾರದಿಂದಲ್ಲ.  ಅದಕ್ಕೆ ಅಳತೆಗಳ ಪರಿಮಿತಿಯೂ ಇರುವುದಿಲ್ಲ. ಕವನ ಮನಸ್ಸಿನ ಅಂತರಾಳದ ವ್ಯವಹಾರ!  ಮನಸ್ಸಿನ ತುಮುಲ, ಒತ್ತಡ, ಭಾವಗಳ ಕನ್ನಡಿಯೇ ಕವನ. ಉಕ್ಕುವ ಭಾವಗಳು ಸಮರ್ಥವಾದ ಭಾಷೆಯ ರೂಪ ತೊಟ್ಟು ಹೊರಹೊಮ್ಮಿದಾಗ ಕವಿ ಅನುಭವಿಸುವ
ಧನ್ಯತೆಯ ಭಾವವೇ ಬಹುಶಃ ಎಲ್ಲಕ್ಕಿಂತಾ ಶ್ರೇಷ್ಟವಾದುದು!

ಅದಕ್ಕೆಂದೇ ಕವಿ ಶೆಲ್ಲಿ ಹೇಳುತ್ತಾನೆ. ‘A Poet is a nightingale who sits in darkness and sings to cheer its own solitude with sweet sounds’ ಒಬ್ಬ ಕವಿ ಕೋಗಿಲೆಯಂತೆ, ಅವನು ಕತ್ತಲಲ್ಲಿ ಕುಳಿತು ತನ್ನ ಅನಾಥ ಒಂಟಿತನ ನೀಗಲು ಸಿಹಿಯಾದ ದನಿಯಲ್ಲಿ ಹಾಡುತ್ತಾನೆ ಎನ್ನುತ್ತಾನೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಆದ್ದರಿಂದಲೇ …….

ಸಹೃದಯನ ಮೆಚ್ಚುಗೆ, ವಿಮರ್ಶಕನ ಟೀಕೆ ಎಲ್ಲಾ ಬಾಹ್ಯ ಬದುಕಿಗೆ ಸಂಬಂಧಿಸಿದ್ದು, ಆದರೆ ಎಲ್ಲಕ್ಕೂ ಮುಖ್ಯವಾದುದು, ಪ್ರಥಮವಾದುದು ಕವಿಯ ಅಂತರಂಗದ ಆತ್ಮ ಸಂತೋಷ! ಕವಿಗೆ ಆತ್ಮ ಸಂತೃಪ್ತಿಯನ್ನು ನೀಡದ ಕವನ ಎಂದೂ ಗೆಲ್ಲುವುದಿಲ್ಲ ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...