Home / ಕವನ / ಕವಿತೆ / ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ ಯಾರಿರಬಹುದು?
ಅದೂ ಇಂಥ ಹೊತ್ತು ಬಡ ಬಡ ಸದ್ದು
ಯಾರಿರಬಹುದು?
ಬಾಗಿಲ ತೆರೆಯೋ ಧೈರ್‍ಯವಿಲ್ಲ
ಯಾರಿರಬಹುದು-ಪೊಲೀಸರಿದ್ದಾರು
ಪಾರ್‍ಟಿಯವರಿದ್ದಾರು
ಎಡಪಕ್ಷ ಬಲಪಕ್ಷ ಜಾಸೂಸಿನವರು
ಕೊಂಡು ಹೋದವರ್‍ಯಾರೂ ಹಿಂದಕ್ಕೆ ಬಂದಿಲ್ಲ
ಬಂದವನೊಬ್ಬನ ನಾಲಿಗೆ ತುಂಡು
ಇನ್ನೊಬ್ಬನ ಕೈತುಂಡು ಮತ್ತೊಬ್ಬನ ಕಾಲ್ತುಂಡು
ಹಲವರಿಗೆ ಕಣ್ಣುಗಳೆ ಇಲ್ಲ
ಅಂಗಾಂಗ ಕತ್ತರಿಸಿ ಬಿಸಾಕುತಾರಂತೆ
ಇಲ್ಲ ತೆರೆಯೋಲ್ಲ ನಾ ಬಾಗ್ಲ ತೆರೆಯೋಲ್ಲ
ದೀಪ ಹಚ್ಚಲ್ಲ ಮಾತಾಡ್ದೆ ಇರ್‍ತೀನಿ
ಸತ್ತಂತೆ ಇರ್‍ತೀನಿ ಮೌನವಾಗಿ
ಹಗಲಾದ್ರೂ ಹೀಗೇನೆ ಇರುಳಾದ್ರೂ ಹೀಗೇನೆ
ಇಲಿಯಂತೆ ಇರಬೇಕು ಯಾರಿಗೂ ಕಾಣಿಸದೆ
ಹೊದ್ದು ಮಲಕೊಳ್ತೀನಿ ಸದ್ದು ಮಾಡದೆ ನಾನು
ಆದ್ರೂ ಬಿಡವಲ್ಲರು ಬಾಗಿಲ ಬಡಿತ
ಬಡೀತಾನೇ ಇದ್ದಾರೆ ಬಡ ಬಡ ಧಡ ಬಡ
ಕೈಲಿ ಬಡೀತಾರೆ ದೊಣ್ಣೆಯಲಿ ಬಡೀತಾರೆ
ಮೊನ್ನೆಯೂ ಹೀಗಿತ್ತು ನಿನ್ನೆಯೂ ಹೀಗಿತ್ತು
ಎಷ್ಟೊತ್ತಿಗೋ ಬಂದು ಬಡೀತಾನೆ ಇರ್‍ತಾರೆ
ನಾಳೇನೂ ಬಡೀತಾರೆ ನಾಡಿದ್ದು ಬಡೀತಾರೆ
ಒಂದಲ್ಲ ಒಂದಿನ ಕೊಂಡೋಗದು ಖಂಡಿತ
ನಾಳೆ ಬರೋದು ಇಂದೇ ಬರ್‍ಲಿ
ತೆರೆದೇ ಬಿಡ್ತೀನಿ ಆಗೋದು ಆಗ್ಲಿ
ನರಕಕ್ಕಿಂತ್ಲು ಅದರ ಭಯವೇ ನರಕಾಂತಾರೆ
ನಾ ಕಾಣದ ನರಕ ಇನ್ನೇನಿದೆ?
ಏನ್ ಬೇಕೋ ಅದು ಮಾಡ್ಳಿ ಏನಾದ್ರೂ ಕಿತ್ಕಳ್ಲಿ
ಕಾಯ ನನ್ದಲ್ಲ ಮನಸು ನನ್ದಲ್ಲ
ಇಂಥ ಭಯಗ್ರಸ್ತ ಊರ್‍ನಲ್ಲಿ
ನಿಲ್ಸಯ್ಯ ನಿನ್ನ ಬಾಗಿಲ ಬಡಿತ
ನಾನಿದೊ ಬಂದೆ ಬಾಗಿಲ ತೆರೆದೆ
ಖಂಡವಿದ ಕೋ ಮಾಂಸವಿದ ಕೊ
ಚಂಡ ವ್ಯಾಘ್ರನೆ ನೀನಿದೆಲ್ಲವನುಂಡು ಸುಖದಿಂದಿರು
ನಾಳೆ ಇನ್ನೊಂದ್ಮನೆ ಹೋಗಿ ನೋಡ್ಕೊ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...